Connect with us

Hi, what are you looking for?

Diksoochi News

ಕರಾವಳಿ

ಉದ್ಯಮಿಗೆ ವಂಚನೆ ಪ್ರಕರಣ: ಚೈತ್ರಾ ಸೇರಿ ಇಬ್ಬರಿಗೆ ಜಾಮೀನು ಮಂಜೂರು

1

ಬೆಂಗಳೂರು : ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ 5 ಕೋಟಿ ರೂಪಾಯಿ ಪಡೆದು ವಂಚಿಸಿದ ಪ್ರಕರಣ ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿರುವ ಚೈತ್ರಾ ಹಾಗೂ ಮತ್ತೊಬ್ಬ ಆರೋಪಿ ಶ್ರೀಕಾಂತ್‌ಗೆ ಸೋಮವಾರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಈ ಇಬ್ಬರಿಗೆ ಜಾಮೀನು ನೀಡಿದೆ. ಮಂಗಳವಾರ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಚೈತ್ರಾ ಹಾಗೂ ಶ್ರೀಕಾಂತ್ ಬಿಡುಗಡೆಯಾಗಲಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿ ಅವರಿಗೆ ಭರವಸೆ ನೀಡಿ, ಹಣ ಪಡೆದು ವಂಚಿಸಿದ ಆರೋಪದ ಮೇಲೆ ಚೈತ್ರಾ ಮತ್ತು ಇತರ ಎಂಟು ಮಂದಿಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು.

Advertisement. Scroll to continue reading.

ವಂಚನೆ ಸಂಬಂಧ ಉದ್ಯಮಿ ಗೋವಿಂದಬಾಬು ಪೂಜಾರಿ ಸೆ.8ರಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು ಇತರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗಿತ್ತು.

ಬಳಿಕ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಚೈತ್ರಾ, ಗಗನ್ ಕಡೂರು, ಹೊಸಪೇಟೆಯ ಸ್ವಾಮೀಜಿ ಹಾಲಶ್ರೀ, ಚನ್ನನಾಯ್ಕ, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಸೇರಿ 8 ಮಂದಿಯನ್ನು ಬಂಧಿಸಲಾಗಿತ್ತು.

ಆರೋಪಿಗಳು ಅಕ್ರಮ ಹಣದಿಂದ ಸಂಪಾದಿಸಿದ್ದ ಲಕ್ಷಾಂತರ ರೂ. ನಗದು ಹಾಗೂ ಕೆಲ ಆಸ್ತಿಗಳ ಪತ್ರಗಳು ಸೇರಿ 4 ಕೋಟಿ ರೂ. ಅಧಿಕ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಅಲ್ಲದೆ, ತನಿಖೆ ಪೂರ್ಣಗೊಳಿಸಿ ಇತ್ತೀಚೆಗಷ್ಟೇ 9 ಮಂದಿ ಆರೋಪಿಗಳ ವಿರುದ್ಧ ಕೋರ್ಟ್‌ಗೆ ಸಿಸಿಬಿ ಆರೋಪಪಟ್ಟಿ ಕೂಡ ಸಲ್ಲಿಸಿತ್ತು.

ಈ ಹಿಂದೆ ಹೊಸಪೇಟೆಯ ಹಾಲಶ್ರೀ ಸ್ವಾಮೀಜಿಗೆ ಜಾಮೀನು ಸಿಕ್ಕಿತ್ತು. ಈ ಮೂಲಕ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಾಂತಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!