ಕೋಟೇಶ್ವರ : ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೇಶ್ವರದಲ್ಲಿ ನಡೆದಿದೆ. ಮೋಹಿತ್ ಎಂ(22) ಆತ್ಮಹತ್ಯೆ ಮಾಡಿಕೊಂಡ ಯುವಕ.
ಮೋಹಿತ್ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಡಿ.9 ರಂದು ಮನೆಗೆ ಬಂದಿದ್ದ ಆತ ಊಟ ಮಾಡಿ ಕೋಣೆ ಸೇರಿದ್ದ. ಸಂಜೆಯಾದರೂ ವಾಪಾಸು ಬರದೇ, ಕರೆದರೂ ಉತ್ತರಿಸದಿದ್ದಾಗ ಸಂಬಂಧಿಕರು ಹಾಗೂ ಊರಿನವರು ಬಾಗಿಲು ಒಡೆದು ಒಳ ಹೋಗಿದ್ದಾರೆ. ಮೋಹಿತ್ ನೇಣು ಬಿಗಿದುಕೊಂಡು ಅಸ್ವಸ್ಥಗೊಂಡಿದ್ದು, ತಕ್ಷಣ ಆತನನ್ನು ಕುಂದಾಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
Advertisement. Scroll to continue reading.
ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.