ಬ್ರಹ್ಮಾವರ : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸೋಮವಾರ(ಡಿ.11) ರಾತ್ರಿ ನಡೆದಿದೆ. ಹೆರಂಜೆಯ ಜಗದೀಶ(40) ಮೃತ ವ್ಯಕ್ತಿ.
ಜಗದೀಶ ಕೊಳಲಗಿರಿಯಲ್ಲಿ ಮರದ ಕೆಲಸ ಮಾಡಿಕೊಂಡಿದ್ದು, ಪ್ರತಿ ದಿನ ಮನೆಯಿಂದ ರೈಲ್ವೇ ಟ್ರ್ಯಾಕ್ ನಲ್ಲಿ ನಡೆದುಕೊಂಡು ಕೆಲಸಕ್ಕೆ ಹೋಗಿ ಬರುತ್ತಿದ್ದರು. ಸೋಮವಾರವೂ ರಾತ್ರಿ ನಡೆದುಕೊಂಡು ಬರುತ್ತಿರುವಾಗ ಆಕಸ್ಮಿಕವಾಗಿ ರೈಲು ಡಿಕ್ಕಿ ಹೊಡೆದಿದೆ.
Advertisement. Scroll to continue reading.
ಪರಿಣಾಮ ಜಗದೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.