Connect with us

Hi, what are you looking for?

Diksoochi News

ಕರಾವಳಿ

ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ

0

ಮಂಗಳೂರು: ಬಂದರು ನಗರಿ ಮಂಗಳೂರಿನಿಂದ ಶೆಲ್‌ ಕಂಪೆನಿಯ ವೈಮಾನಿಕ ಇಂಧನ (ಏರ್‌ಲೈನ್‌ ಟರ್ಬೈನ್‌ ಫ‌ುಯಲ್‌ -ಎಟಿಎಫ್-ಅಥವಾ ಏವಿ ಯೇಶನ್‌ ಪೆಟ್ರೋಲ್‌)ವನ್ನು ಹೊತ್ತು ನೆದರ್ಲೆಂಡ್‌ಗೆ ತೆರಳುತ್ತಿದ್ದ ಸರಕು ಹಡಗಿನ ಮೇಲೆ ಯೆಮೆನ್‌ ಸಮೀಪ ಕಡಲ್ಗಳ್ಳರು ಕ್ಷಿಪಣಿ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಕಡಲ್ಗಳ್ಳರ ಗುರಿ ತಪ್ಪಿದ ಪರಿಣಾಮ ಅದೃಷ್ಟವಶಾತ್ ಹಡಗಿಗೆ ಯಾವುದೇ ಅಪಾಯವಾಗಿಲ್ಲ. ಹಡಗು-ಸಿಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಶೆಲ್‌ ಕಂಪೆನಿಯು ಖರೀದಿಸಿ ನೆದರ್ಲೆಂಡ್‌ಗೆ ಸಾಗಾಟ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹಡಗಿಗೆ ಡಿ. 6ರಂದು ಮಂಗಳೂರಿನಲ್ಲಿ ತೈಲ ಸಂಗ್ರಹ ಮಾಡಲಾಗಿತ್ತು.

Advertisement. Scroll to continue reading.

ಡಿ. 11ರಂದು ರಾತ್ರಿ ಯೆಮೆನ್‌ನ ಬಂಡುಕೋರರ ಆಡಳಿತವಿರುವ ಬಾಬ್‌ ಎಲ್‌-ಮಂಡೆಬ್‌ ಕೊಲ್ಲಿಯಲ್ಲಿ ಕ್ಷಿಪಣಿ ದಾಳಿ ನಡೆದಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!