Connect with us

Hi, what are you looking for?

Diksoochi News

ಕರಾವಳಿ

 ಉಡುಪಿ : ಸಭೆ, ಸಮಾರಂಭಗಳಲ್ಲಿ ಮರು ಬಳಕೆಯ ವಸ್ತುಗಳನ್ನು ಬಳಸಲು ಸೂಚನೆ; ಡಿ.31ರ ಗಡುವು

1

 ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್ ಹಾಗೂ ರೀಸೈಕಲ್  ಮಾದರಿಯಲ್ಲಿ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಬೇಕು ಹಾಗೂ ಪ್ರಸ್ತುತ ಬಳಸುತ್ತಿರುವ ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶ್ಯೂಗಳನ್ನು ಬಳಸಬಾರದು.

 ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿಸಲು, ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು.

Advertisement. Scroll to continue reading.

ಉದ್ದಿಮೆದಾರರು, ವ್ಯಾಪಾರಸ್ಥರು, ಫಾಸ್ಟ್ ಫುಡ್ ಅಂಗಡಿಯವರು ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶೂಗಳನ್ನು ಡಿಸೆಂಬರ್ 31 ರ ಒಳಗೆ ಖಾಲಿ ಮಾಡಬೇಕು. ನಂತರ ಮಾರಾಟ ಮಾಡುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

error: Content is protected !!