ಕಾರವಾರ: ಹೊಳೆಯಲ್ಲಿ ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವ ಘಟನೆ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ.
ಮೌಲಾನ ಮಹಮ್ಮದ್ ಸಲೀಮ್, ಕಲೀಲ್ ರೆಹಮಾನ್(44), ನಬಿಲ್ ನೂರ್ ಅಹ್ಮದ್(22), ನಾದಿಯಾ ನೂರ್(20), ಉಮರ್ ಸಿದ್ದಿಕ್(14) ಮತ್ತು ಮಿಸ್ಬಾ ತಬಸುಮ್(17) ಮೃತ ದುರ್ದೈವಿಗಳು. ಮೃತರು ರಾಮನಬೈಲಿನ ನಿವಾಸಿಗಳು ಎಂದು ತಿಳಿದುಬಂದಿದೆ.
ಭಾನುವಾರ ರಜೆ ಹಿನ್ನೆಲೆಯಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ತೆರಳಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸದ್ಯ ಓರ್ವನ ಮೃತ ದೇಹ ಪತ್ತೆಯಾಗಿದೆ. ಉಳಿದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Advertisement. Scroll to continue reading.

ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
In this article:bhuthadagundi, death, Diksoochi news, karavara, sahasralinga, shirasi, ನೀರುಪಾಲು, ಹೊಳೆ

Click to comment