ನಾಗ್ಪುರ: ಸೋಲಾರ್ ಇಂಡಸ್ಟ್ರೀಸ್ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 9 ಮಂದಿ ಸಾವನ್ನಪ್ಪಿರುವ ಘಟನೆ ನಾಗ್ಪುರದ ಬಜಾರ್ಗಾಂವ್ನಲ್ಲಿ ನಡೆದಿದೆ.
ಸ್ಫೋಟದ ನಂತರ ಸ್ಥಾವರದಲ್ಲಿ ಕಾಲ್ತುಳಿತ ಸಂಭವಿಸಿದೆ. ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದೆ.
ನಾಗ್ಪುರದ ಬಜಾರ್ಗಾಂವ್ನಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಭಾರೀ ಸ್ಫೋಟವು ಭೀತಿಯನ್ನು ಸೃಷ್ಟಿಸಿದೆ. ಸ್ಫೋಟದ ವೇಳೆ ಕಾರ್ಮಿಕರು ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು.

ಕಾರ್ಮಿಕರು ಕಲ್ಲಿದ್ದಲು ಸ್ಫೋಟಕ್ಕೆ ಗನ್ ಪೌಡರ್ ಪ್ಯಾಕ್ ಮಾಡುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಕಾರ್ಖಾನೆ ಸ್ಫೋಟದಲ್ಲಿ ಗಾಯಗೊಂಡಿರುವ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಸ್ಥೆಯಲ್ಲಿ ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಂಬಂಧಿತ ವಸ್ತುಗಳನ್ನು ಪೂರೈಸಲು ಕೆಲಸ ಮಾಡುತ್ತದೆ.
5 ಲಕ್ಷ ಪರಿಹಾರ :
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಘಟನೆಯನ್ನು ದುರದೃಷ್ಟಕರ ಎಂದು ಹೇಳಿದ್ದಾರೆ. 9 ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ನೀಡಲಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಿರ್ಧಾರವನ್ನು ಅನುಮೋದಿಸಿದ್ದಾರೆ ಎಂದು ಅವರು ಎಕ್ಸ್ನಲ್ಲಿ ಮಾಹಿತಿ ನೀಡಿದ್ದಾರೆ..
ಸೋಲಾರ್ ಇಂಡಸ್ಟ್ರೀಸ್ನಲ್ಲಿ ನಡೆದ ಸ್ಫೋಟದಲ್ಲಿ ಆರು ಮಹಿಳೆಯರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ. ಇದು ಸಶಸ್ತ್ರ ಪಡೆಗಳಿಗೆ ಡ್ರೋನ್ ಮತ್ತು ಸ್ಫೋಟಕಗಳನ್ನು ತಯಾರಿಸುವ ಕಂಪನಿಯಾಗಿದೆ ಎಂದು ಅವರು ಹೇಳಿದರು.
