ಉಡುಪಿ : ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎಸ್.ಸಿ (ಕೃಷಿ) ಪದವಿ ಹೊಂದಿರುವ, ಕಂಪ್ಯೂಟರ್ ಜ್ಞಾನ ಮತ್ತು ಕೃಷಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವವುಳ್ಳವರು ಡಿಸೆಂಬರ್ 26 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
Advertisement. Scroll to continue reading.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ ಸಿ-304, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.