Connect with us

Hi, what are you looking for?

Diksoochi News

ಕರಾವಳಿ

ಶಿರ್ವ : ಹಿರಿಯ ಕಾಂಗ್ರೆಸ್ ಮುಖಂಡ ಇಗ್ನೇಶಿಯಸ್ ಡಿಸೋಜಾ ನಿಧನ

0

ಶಿರ್ವ: ಪ್ರಗತಿಪರ ಕೃಷಿಕ,ಹಿರಿಯ ಕಾಂಗ್ರೆಸ್‌ ಧುರೀಣ, ಉಡುಪಿ ತಾ.ಪಂ. ಮಾಜಿ ಉಪಾಧ್ಯಕ್ಷ ಇಗ್ನೇಶಿಯಸ್‌ ಡಿಸೋಜಾ ಅವರು ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಮಟ್ಟಾರು ಧರ್ಮೆಟ್ಟುವಿನ ಸ್ವಗೃಹದಲ್ಲಿ ಕಳೆದೊಂದು ವರ್ಷದಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಅವರು ಅನಾರೋಗ್ಯದಿಂದ ಕಳೆದ 3-4 ದಿನಗಳ ಹಿಂದೆ ಮೃತಪಟ್ಟಿರ ಬಹುದೆಂದು ಶಂಕಿಸಲಾಗಿದೆ.

ಅವರು ಅನಾರೋಗ್ಯದಿಂದ ಕಳೆದ 3-4 ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

Advertisement. Scroll to continue reading.

ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಮತ್ತು ಸಹಾಯಕ ನಾಗರಾಜ್‌ ಸಹಕಾರದೊಂದಿಗೆ ಮೃತದೇಹವನ್ನು ಮಣಿಪಾಲದ ಕೆಎಂಸಿ ಶವಾಗಾರಕ್ಕೆ ರವಾನಿಸಲಾಗಿದೆ. ಪುತ್ರ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ , 6 ಮಂದಿ ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಉಡುಪಿ ತಾ.ಪಂ.ಸದಸ್ಯರಾಗಿ 2 ಬಾರಿ ಆಯ್ಕೆಯಾಗಿದ್ದ ಅವರು ತಾ.ಪಂ. ಉಪಾಧ್ಯಕ್ಷರಾಗಿ, ಶಿರ್ವ ಮಂಡಲ ಪಂಚಾಯತ್‌ನ ಮಂಡಲ ಪ್ರಧಾನರಾಗಿ,3 ಅವಧಿಗೆ ಮಂಡಲ ಪಂ. ಸದಸ್ಯರಾಗಿ,ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ದಿ.ಆಸ್ಕರ್‌ ಫೆರ್ನಾಂಡಿಸ್‌ ಅವರ ಒಡನಾಡಿಯಾಗಿದ್ದ ಅವರು 10 ವರ್ಷಗಳ ಕಾಲ ಕಾಪು ಬ್ಲಾಕ್‌ ಕಾಂಗ್ರೆಸ್‌ನ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್‌ನ ಅಲ್ಪಸಂಖ್ಯಾಕ ವಿಭಾಗದ ಅಧ್ಯಕ್ಷರಾಗಿ,ಭೂನ್ಯಾಯ ಮಂಡಳಿಯ ಸದಸ್ಯರಾಗಿ,ಜಿಲ್ಲಾ ಕೆಡಿಪಿ ಸದಸ್ಯರಾಗಿ,ಶಿರ್ವ ಚರ್ಚ್‌ ಆರ್ಥಿಕ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!