ಉಡುಪಿ : ಕಾನೂನು ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಮಾಹೆಯಾನ 2000 ರೂ. ನಂತೆ ಪ್ರೋತ್ಸಾಹಧನ ಮಂಜೂರು ಮಾಡಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಡಿಯಲ್ಲಿ ವಕೀಲ ವೃತ್ತಿಗೆ ನೋಂದಾಯಿಸಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2024 ರ ಜನವರಿ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ನ್ಯಾಯಾಧೀಶರು, ನವ ಕಾನೂನು ಪದವೀಧರರಿಗೆ ಪ್ರೋತ್ಸಾಹಧನದ ಅನುದಾನವನ್ನು ಬಿಡುಗಡೆ ಮಾಡುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಅಧ್ಯಕ್ಷರು, ಉಡುಪಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement. Scroll to continue reading.