ಉಡುಪಿ : ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಬಿ.ಸುಧಾಕರ್ ಶೆಟ್ಟಿ ಇಂದು ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಕರಾವಳಿ ಬೈಪಾಸ್ ನಲ್ಲಿರುವ ಶಾರದ ಹೊಟೇಲ್ ನ ಮಾಲಕರಾಗಿದ್ದ ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು.
2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಸೋಲು ಕಂಡಿದ್ದರು.
Advertisement. Scroll to continue reading.

2004ರ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
2013ರ ಚುನಾವಣೆ ಯಲ್ಲಿ ಸುಧಾಕರ್ ಶೆಟ್ಟಿ ಕಣಕ್ಕಿಳಿದಿದ್ದರು. ಆದರೆ ಅವರು ಪ್ರಮೋದ್ ಮಧ್ವರಾಜ್ ವಿರುದ್ಧ ಸೋಲು ಅನುಭವಿಸಿದ್ದರು.
Advertisement. Scroll to continue reading.

In this article:death, Diksoochi news, Featured, sharada hotel, sudhakar shetty, udupi hotel

Click to comment