ನವದೆಹಲಿ: ಮಾಲ್ಡೀವ್ಸ್ ಸರ್ಕಾರದ ಅಧಿಕಾರಿಗಳಿಂದ ಭಾರತ ವಿರೋಧಿ ಹೇಳಿಕೆ ವಿರುದ್ಧ ಭಾರತೀಯರು ಕಿಡಿಕಾರುತ್ತಿದ್ದಾರೆ. ಜನ ಸಾಮಾನ್ಯರು ಮಾತ್ರವಲ್ಲಿದೆ, ಸೆಲೆಬ್ರಿಟಿಗಳೂ ಹಿಂದೆ ಬಿದ್ದಿಲ್ಲ. ಸಿನಿ ತಾರೆಯರು, ಕ್ರೀಡಾಪಟುಗಳು ಮಾಲ್ಡೀವ್ಸ್ ಅಧಿಕಾರಿಗಳ ನಡೆಗೆ ವ್ಯಂಗ್ಯವಾಡುತ್ತಿದ್ದಾರೆ. ಇದೀಗ ಸೆಹ್ವಾಗ್ ಸರದಿ.
ಹೌದು, ಮಾಜಿ ಟೀಂ ಇಂಡಿಯಾ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್, ಭಾರತ ಮತ್ತು ಪ್ರಧಾನಿ ಮೋದಿ ವಿರುದ್ಧ ಅನಗತ್ಯ ಹೇಳಿಕೆ ಹಿನ್ನೆಲೆಯಲ್ಲಿ ಉಡುಪಿ, ಅಂಡಮಾನ್ ಬೀಚ್ ಮತ್ತಿತರ ಸುಂದರ ಬೀಚ್ ಗಳ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಸ್ವದೇಶಿ ಬೀಚ್ ಗಳ ಅಭಿವೃದ್ಧಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಯುತ್ತಿದ್ದು, ಸಚಿನ್ ತೆಂಡೊಲ್ಕರ್, ಸುರೇಶ್ ರೈನಾ, ಇರ್ಫಾನ್ ಪಠಾಣ್, ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಮತ್ತಿತರರು ಕೈ ಜೋಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉಡುಪಿಯ ಮರವಂತೆ, ಪೊಂಡಿಯ ಪ್ಯಾರಡೈಸ್, ಅಂಡಮಾನ್ನ ನೀಲ್ ಮತ್ತು ಹ್ಯಾವ್ಲಾಕ್ ಬೀಚ್ ಗಳ ಫೋಟೋಗಳನ್ನು ಹಂಚಿಕೊಂಡಿರುವ ಸೆಹ್ವಾಗ್, ದೇಶದಲ್ಲಿ ಅನ್ವೇಷಿಸದ ಹಲವಾರು ಸ್ಥಳಗಳಿದ್ದು, ಮೂಲಸೌಕರ್ಯ ಒದಗಿಸುವುದರೊಂದಿಗೆ ಅವುಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.
ವಿರೇಂದ್ರ ಸೆಹ್ವಾಗ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಇದು ತುಂಬಾ ಪ್ರಸ್ತುತವಾಗಿದೆ ಮತ್ತು ನಮ್ಮದೇ ಅತ್ಯಂತ ಉತ್ತಮವಾಗಿದೆ. ಲಕ್ಷದ್ವೀಪ ಮತ್ತು ಅಂಡಮಾನ್ಗಳಿಗೆ ಹೋಗಿದ್ದು, ಅವುಗಳು ಆಶ್ಚರ್ಯಕರವಾದ ಸುಂದರವಾದ ಸ್ಥಳಗಳಾಗಿವೆ. ಬೆರಗುಗೊಳಿಸುವ ಕಡಲತೀರಗಳು ಮತ್ತು ನೀರೊಳಗಿನ ಅನುಭವವು ನಂಬಲಾಗದ್ದು ಎಂದಿದ್ದಾರೆ.
Viru paji .. this is so relevant and in the right spirit of our land .. our own are the very best .. I have been to Lakshadweep and Andamans and they are such astonishingly beautiful locations .. stunning waters beaches and the underwater experience is simply unbelievable ..
हम… https://t.co/NM400eJAbm— Amitabh Bachchan (@SrBachchan) January 8, 2024

