Connect with us

Hi, what are you looking for?

Diksoochi News

ರಾಜ್ಯ

ರೇಸ್ ಕೋರ್ಸ್‌ ಮೇಲೆ ಸಿಸಿಬಿ ದಾಳಿ; 3.47 ಕೋಟಿ ವಶಕ್ಕೆ

1

ಬೆಂಗಳೂರು: ರೇಸ್ ಕೋರ್ಸ್‌ನ ಕುದುರೆ ರೇಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 3.47 ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬುಕ್ಕಿಂಗ್ ಕೌಂಟರ್ ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್ಟಿ ಕಟ್ಟದೇ ವಂಚನೆ ಮಾಡಿದ ಆರೋಪಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಕಳೆದ ರಾತ್ರಿ ಬುಕ್ಕಿಂಗ್‌ ಕೌಂಟರ್‌ಗಳನ್ನು ಲಾಕ್ ಮಾಡಿ ಕೌಂಟರ್‌ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ತಡೆದು ಪರಿಶೀಲನೆ ನಡೆಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಅಂತ್ಯಗೊಳಿಸಿದ್ದಾರೆ.

ಈ ವೇಳೆ 60 ಜನರನ್ನ ವಶಕ್ಕೆ ಪಡೆದು ಅವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Advertisement. Scroll to continue reading.

ಬಳಿಕ ಅವರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು ಕರೆದಾಗ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಅನಧಿಕೃತ ಬೆಟ್ಟಿಂಗ್ ನಡೆಸಲಾಗುತ್ತಿತ್ತು

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಅಧಿಕೃತವಾಗಿ ಬೆಟ್ಟಿಂಗ್ ಜೊತೆಗೆ ಅನಧಿಕೃತವಾಗಿ ಕೂಡ ಬೆಟ್ಟಿಂಗ್ ನಡೆಸಲಾಗುತ್ತಿತ್ತು ಎಂದು ಹೇಳಿದ್ದಾರೆ.

ಯಾವುದೇ ದಾಖಲೆಗಳು, ರಶೀದಿ ಇಟ್ಟುಕೊಳ್ಳದೇ ಹಣದ ವ್ಯವಹಾರ ನಡೆಸಲಾಗುತ್ತಿತ್ತು. ಈ ಹಿನ್ನಲೆ ದಾಳಿ‌ ಮಾಡಿ ಬರೋಬ್ಬರಿ ಮೂರು ಕೋಟಿ 45 ಲಕ್ಷ ರೂಪಾಯಿ ನಗದು ವಶಪಡೆಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ 66 ಜನರನ್ನು ಠಾಣೆಗೆ ಕರೆಸಿ ಮಾಹಿತಿ ಪಡೆದು ನೊಟೀಸ್ ನೀಡಲಾಗಿದೆ. ಐಪಿಸಿ ಸೆಕ್ಷನ್ 41ರ ಅಡಿ ನೊಟೀಸ್ ನೀಡಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು.

Advertisement. Scroll to continue reading.

ಅನಧಿಕೃತವಾಗಿ ನಡೆಸಲಾಗುತ್ತಿದ್ದ ಬೆಟ್ಟಿಂಗ್‌ನ ಲಾಭ ಯಾರು ಪಡೆದುಕೊಳ್ಳುತ್ತಿದ್ದಾರೆ, ಇದರ ಹಿಂದೆ ಯಾರಿದಾರೆ ಎಂಬುದರ ಬಗ್ಗೆ ಸಿಸಿಬಿ ತನಿಖಾಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ರೀತಿ ಅಕ್ರಮ‌ ಬೆಟ್ಟಿಂಗ್‌ನಿಂದ ಜಿಎಸ್ಟಿ ವಂಚನೆ ಆಗಿದೆ.

ಶೇ.28 ರಷ್ಟು ಜಿಎಸ್ಟಿ ಕಟ್ಟಬೇಕು. ಆದರೆ ಜಿಎಸ್ಟಿ ತೆರಿಗೆ ವಂಚನೆ ಮಾಡಲಾಗಿದೆ. ಅನಧಿಕೃತ ವ್ಯಕ್ತಿಗಳು ಕೌಂಟರ್ ನಡೆಸುತ್ತಿದ್ದ ಮಾಹಿತಿ ಸಿಕ್ಕಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಪಡೆದು ತನಿಖೆ ನಡೆಸಲಾಗುತ್ತದೆ ಎಂದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!