Connect with us

Hi, what are you looking for?

Diksoochi News

ರಾಜ್ಯ

ವಿದ್ಯುತ್ ಆಘಾತ; 9 ವರ್ಷದ ಬಾಲಕ ಸಾವು

0

ಚಿಕ್ಕಬಳ್ಳಾಪುರ : ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಮಂಚೇನಹಳ್ಳಿಯಲ್ಲಿ ನಡೆದಿದೆ.

ಇತ್ತೀಚಿಗೆ ಗದಗನಲ್ಲಿ ಯಶ್ ಬರ್ತಡೇ ಕಟೌಟ್ ನಿಲ್ಲಿಸಲು ಹೋಗಿ ವಿದ್ಯುತ್ ಶಾಕ್‌‌ನಿಂದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ದುರಂತ ಸಂಭವಿಸಿದೆ.

ಮೀನಾಕ್ಷಿ-ಮೂರ್ತಿ ದಂಪತಿಗಳ ಪುತ್ರ ನಾಗೇಂದ್ರ (8) ಕರೆಂಟ್ ಶಾಕ್‌ನಿಂದ ಮೃತಪಟ್ಟಿದ್ದಾನೆ.

Advertisement. Scroll to continue reading.

ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಈ ದುರ್ಘಟನೆ ನಡೆದಿದೆ.

ರಸ್ತೆ ದಾಟಲು ಹೋದ ಸಂದರ್ಭ ಟ್ರಾನ್ಸ್‌ಫಾರ್ಮರ್ ಗ್ರೌಂಡಿಂಗ್ ವೈರ್‌ನಿಂದ ವಿದ್ಯುತ್ ಶಾಕ್ ತಗುಲಿ ಬಾಲಕ ಮೃತಪಟ್ಟಿದ್ದಾನೆ.

ರಸ್ತೆ ಅಗಲೀಕರಣಕ್ಕಾಗಿ ಟ್ರಾನ್ಸ್‌ಫಾರ್ಮರ್ ಬಳಿ ಮಣ್ಣು ತೆಗೆಯಲಾಗಿತ್ತು. ಮಣ್ಣು ತೆಗೆದ ಪರಿಣಾಮ ಹೊಂಡದಲ್ಲಿ ನೀರು ಶೇಖರಣೆಯಾಗಿದೆ. ರಸ್ತೆ ದಾಟಲು ಟ್ರಾನ್ಸ್‌ಫಾರ್ಮರ್ ಬದಿಯಲ್ಲಿ ಹೋಗುವಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!