Connect with us

Hi, what are you looking for?

Diksoochi News

ರಾಷ್ಟ್ರೀಯ

ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕೇಂದ್ರ ಸರ್ಕಾರದಿಂದ ಗಿಫ್ಟ್; ಅರ್ಧ ದಿನ ರಜೆ ಘೋಷಣೆ

0

ನವದೆಹಲಿ : ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆ ದೇಶದೆಲ್ಲೆಡೆ ರಾಮ ಭಕ್ತರು ಸಂಭ್ರಮದಲ್ಲಿದ್ದಾರೆ. ಜನವರಿ 22ರಂದು ಪ್ರಾಣಪ್ರತಿಷ್ಠೆ ನಡೆಯಲಿದ್ದು, ರಾಮಲಲ್ಲಾ ಮೆರವಣಿಗೆ, ಪೂಜೆ ಸೇರಿದಂತೆ ಹಲವು ಪೂಜಾ ಕೈಂಕರ್ಯಗಳು ನಿರಂತರವಾಗಿ ನಡೆಯುತ್ತಿದೆ. ಇದೀಗ ಕೇಂದ್ರ ಸರ್ಕಾರ ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಬಂಪರ್ ಗಿಫ್ಟ್ ಘೋಷಿಸಿದೆ.

ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಜನವರಿ 22ರಂದು ಕೇಂದ್ರ ಸರ್ಕಾರಿ ನೌಕರರು, ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಿದೆ.

ಜನವರಿ 22ರಂದು ಮಧ್ಯಾಹ್ನ 2.30ರ ವರೆಗೆ ಕೇಂದ್ರ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿ, ನೌಕರರಿಗೆ ರಜೆ ನೀಡಲಾಗಿದೆ.

Advertisement. Scroll to continue reading.

ಉತ್ತರ ಪ್ರದೇಶದಲ್ಲಿ ಜನವರಿ 22ರಂದು ಎಲ್ಲಾ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ಮದ್ಯ ಮಾರಾಟ ಹಾಗೂ ಮಾಂಸ ಮಾರಾಟವನ್ನೂ ನಿಷೇಧಿಸಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಹರ್ಯಾಣ, ಚತ್ತೀಸಘಡ ಸೇರಿದಂತೆ ಕೆಲ ರಾಜ್ಯಗಳು ಸಾರ್ವತ್ರಿಕ ರಜೆ ಘೋಷಿಸಿದೆ

ಜನವರಿ 16ರಿಂದಲೇ ಆಯೋಧ್ಯೆ ರಾಮ ಮಂದಿರದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ. ಜನವರಿ 22ರ 12.30ಕ್ಕೆ ರಾಮ ಮಂದಿರ ಪ್ರಾಣಪ್ರತಿಷ್ಠೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಮಾಡಲಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!