ರಾಮೇಶ್ವರಂ: ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಇರುವುದರಿಂದ ಪ್ರಧಾನಿ ಮೋದಿ ಕೆಲವು ಆಚರಣೆ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಸಮುದ್ರದಲ್ಲಿ ಮಿಂದೆಳುವ ಮೂಲಕ ಮತ್ತೊಮ್ಮೆ ದೇಶದ ಗಮನ ಸೆಳೆದಿದ್ದಾರೆ.
ಅಗ್ನಿತೀರ್ಥ ಕಡಲತೀರದಲ್ಲಿ ತಣ್ಣೀರಿನಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ರುದ್ರಾಕ್ಷಿ ಮಾಲೆಯೊಂದಿಗೆ ಮಂತ್ರ ಜಪಿಸುತ್ತಾ ದೇವಾಲಯಕ್ಕೆ ಆಗಮಿಸಿದರು. ಪುರಾತನ ರಾಮನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅವರಿಗೆ ಆರ್ಚಕರಿಂದ ಸಾಂಪ್ರದಾಯಿಕ ಗೌರವ ನೀಡಲಾಯಿತು. ಬಳಿಕ ದೇಗುಲದಲ್ಲಿ ನಡೆಯುವ ಭಜನೆಯಲ್ಲಿಯೂ ಮೋದಿ ಭಾಗವಹಿಸಿದ್ದರು.
ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ದ್ವೀಪದಲ್ಲಿರುವ ಶಿವ ದೇವಾಲಯವು ರಾಮಾಯಣದೊಂದಿಗೆ ಸಂಪರ್ಕ ಹೊಂದಿದೆ. ಇಲ್ಲಿರುವ ಶಿವಲಿಂಗವನ್ನು ಶ್ರೀರಾಮ ಸ್ಥಾಪಿಸಿದನೆಂಬ ಪ್ರತೀತಿ ಇದೆ. ಶ್ರೀರಾಮ ಮತ್ತು ಸೀತಾದೇವಿ ಇಲ್ಲಿ ಈ ಶಿವಲಿಂಗವನ್ನು ಪೂಜಿಸಿ, ಪ್ರಾರ್ಥನೆ ಸಲ್ಲಿಸಿದ್ದರು ಎಂದು ಹೇಳಲಾಗಿದೆ. ೧೨ ಜ್ಯೋತಿರ್ಲಿಂಗಗಳಲ್ಲಿ ಈ ಸನ್ನಿಧಾನವೂ ಒಂದಾಗಿದೆ.

#WATCH | Prime Minister Narendra Modi offers prayers at Sri Arulmigu Ramanathaswamy Temple in Rameswaram, Tamil Nadu. The Prime Minister also took a holy dip into the sea here. pic.twitter.com/v7BCSxdnSk— ANI (@ANI) January 20, 2024
#WATCH | Prime Minister Narendra Modi offers prayers at Sri Arulmigu Ramanathaswamy Temple in Rameswaram
The main deity worshipped in this temple is Sri Ramanathaswamy, which is a form of Bhagwan Shiva. It is a widely held belief that the main lingam in this temple was… pic.twitter.com/EF7YBMV87P— ANI (@ANI) January 20, 2024