ಬೆಂಗಳೂರು: ಕೊಳೆ ಬಟ್ಟೆ ಧರಿಸಿದ್ದಾನೆಂದು ನಮ್ಮ ಮೆಟ್ರೊದ ಭದ್ರತಾ ಸಿಬ್ಬಂದಿ ಆತನಿಗೆ ಮೆಟ್ರೊದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿರುವ ಘಟನೆ ವರದಿಯಾಗಿದೆ.
ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಹರಿದಾಡುತ್ತಿದೆ.
ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ , ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ.— ನಮ್ಮ ಮೆಟ್ರೋ (@OfficialBMRCL) February 26, 2024
ಘಟನೆ ಬಗ್ಗೆ ಸ್ಪಷ್ಟನೆ ನೀಡಿರುವ ಬಿಎಂಆರ್ಸಿಎಲ್, ‘ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ, ಭದ್ರತಾ ಮೇಲ್ವಿಚಾರಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ’ ಎಂದು ಎಕ್ಸ್ ತಾಣದಲ್ಲಿ ಮಾಹಿತಿ ನೀಡಿದೆ.

ರೈತನೆಂದು ಹೇಳಲಾದ ವ್ಯಕ್ತಿ ತಲೆಮೇಲೆ ಗಂಟು ಹೊತ್ತುಕೊಂಡು ಮೆಟ್ರೊ ನಿಲ್ದಾಣ ಪ್ರವೇಶಿಸಿದ್ದರು. ಆ ವ್ಯಕ್ತಿ ಕೊಳೆ ಬಟ್ಟೆ ಧರಿಸಿದ್ದಾರೆಂದು ಭದ್ರತಾ ಸಿಬ್ಬಂದಿ ಮೆಟ್ರೊದಲ್ಲಿ ಪ್ರಯಾಣಿಸಲು ಅವಕಾಶ ನೀಡುತ್ತಿಲ್ಲ ಎಂದು ವ್ಯಕ್ತಿಯೊಬ್ಬರು ಸ್ಥಳದಿಂದ ವೀಡಿಯೋ ಮಾಡಿ ಬಿಟ್ಟಿದ್ದರು.
UNBELIEVABLE..! Is metro only for VIPs? Is there a dress code to use Metro?
I appreciate actions of Karthik C Airani, who fought for the right of a farmer at Rajajinagar metro station. We need more such heroes everywhere. @OfficialBMRCL train your officials properly. #metro pic.twitter.com/7SAZdlgAEH— Deepak N (@DeepakN172) February 24, 2024
ವ್ಯಕ್ತಿಯನ್ನು ಒಳಗೆ ಬಿಡಿ ಎಂದು ವೀಡಿಯೋ ಮಾಡುತ್ತಿದ್ದವರು ಹಾಗೂ ಸ್ಥಳದಲ್ಲಿದ್ದ ಕೆಲವರು ಭದ್ರತಾ ಸಿಬ್ಬಂದಿಯನ್ನು ಒತ್ತಾಯಿಸಿದ್ದರು. ಬಳಿಕ ಆ ವ್ಯಕ್ತಿ ಮೆಟ್ರೊದಲ್ಲಿ ಪ್ರಯಾಣಿಸಿದ್ದರು.
ಈ ಘಟನೆ ಬಗ್ಗೆ ನಮ್ಮ ಮೆಟ್ರೊದ ಭದ್ರತಾ ಸಿಬ್ಬಂದಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

