ಬೆಂಗಳೂರು: ಪಾಕಿಸ್ತಾನ ಬಿಜೆಪಿಗೆ ಶತ್ರು ದೇಶ ಆಗಿರಬಹುದು, ಕಾಂಗ್ರೆಸ್ ಅದನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಧಾನ ಪರಿಷತ್ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿರುವ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶತ್ರುದೇಶದೊಂದಿಗೆ ನಮ್ಮ ಸಂಬಂಧದ ಬಗ್ಗೆ ಅವರು ಮಾತನಾಡುತ್ತಾರೆ. ಅವರ ಪ್ರಕಾರ, ಪಾಕಿಸ್ತಾನ ಎನ್ನುವುದು ಶತ್ರುದೇಶ. ಆದರೆ, ನಮಗೆ ಪಾಕಿಸ್ತಾನ ಯಾವತ್ತಿಗೂ ಶತ್ರುದೇಶವಲ್ಲ. ಇದು ನಮ್ಮ ನೆರೆಯ ರಾಷ್ಟ್ರವಷ್ಟೆ ಎಂದರು.
ಇತ್ತೀಚೆಗೆ ಕೇಂದ್ರ ಸರ್ಕಾರ ಎಲ್ಕೆ ಆಡ್ವಾಣಿಗೆ ಭಾರತ ರತ್ನ ನೀಡಿ ಗೌರವಿಸಿತು. ಆದರೆ, ಅವರು ಪಾಕಿಸ್ತಾನದ ಲಾಹೋರ್ನಲ್ಲಿರುವ ಜಿನ್ನಾ ಸಮಾಧಿಗೆ ಭೇಟಿ ನೀಡಿ, ಅವರಷ್ಟು ಜಾತ್ಯಾತೀತ ನಾಯಕ ಯಾರೂ ಇಲ್ಲ ಎಂದಿದ್ದರು. ಆಗ ಬಿಜೆಪಿಗರಿಗೆ ಪಾಕಿಸ್ತಾನ ಶತ್ರು ದೇಶವಾಗಿರಲಿಲ್ಲವೇ? ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ.
"Pakistan is enemy for BJP, not for Congress"
-Congress leader BK Hariprasad
This is why Bharat Needs not only BJP 3.0 but always and forever. pic.twitter.com/c9AUvoe0lv— BALA (@erbmjha) February 28, 2024
ಈ ಹೇಳಿಕೆ ಬೆನ್ನಲ್ಲೇ ಹಲವಾರು ಬಿಜೆಪಿ ಸದಸ್ಯರು ವಾಗ್ದಾಳಿ ನಡೆಸಿದರು. ಹರಿಪ್ರಸಾದ್ ಅವರ ಹೇಳಿಕೆ ಕಾಂಗ್ರೆಸ್ ಪಾಕಿಸ್ತಾನದ ಬಗ್ಗೆ ಮೃದುತ್ವವನ್ನು ತೋರಿಸುತ್ತಿರುವುದು ಸಾಬೀತುಪಡಿಸುತ್ತಿದೆ ಎಂದರು ಹೇಳಿದರು.
ಈ ನಡುವೆ ತಮ್ಮ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಹರಿಪ್ರಸಾದ್ ಅವರು, ಬಿಜೆಪಿ ಪಕ್ಷಕ್ಕೂ, ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ, ದ್ವೇಷ ಇದ್ದರೆ “ಶತ್ರುರಾಷ್ಟ್ರ” ಎಂದು ಘೋಷಿಸಲಿ ಎಂದು ಸವಾಲು ಹಾಕಿದ್ದಾರೆ.

