ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಬಾಂಬ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಹೋಟೆಲ್ ನಲ್ಲಿರುವ ಅಡುಗೆ ಅನಿಲ ಸಿಲಿಂಡರ್ ಸ್ಫೋಟವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ರು. ಆದರೆ, ಇದೀಗ ಅಲ್ಲಿ ಸಣ್ಣ ಪ್ರಮಾಣದ ಬಾಂಬ್ ಗಳು ಸ್ಫೋಟವಾಗಿರುವ ಬಗ್ಗೆ ವರದಿಯಾಗಿದೆ.
ಸ್ಫೋಟ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಎಫ್ಎಸ್ ಎಲ್ ತಜ್ಞರು, ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿದ್ದಾರೆ.
ಹೋಟೆಲ್ ಹಾಗೂ ಸುತ್ತಮುತ್ತಲಿನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಅದರಲ್ಲಿ ಗ್ರಾಹಕನೊಬ್ಬ ಹೋಟೆಲ್ ನೊಳಕ್ಕೆ ತಂದಿದ್ದ ಬ್ಯಾಗ್ ನಿಂದಲೇ ಸ್ಫೋಟವಾಗಿರುವುದು ಖಚಿತವಾಗಿದೆ.
Advertisement. Scroll to continue reading.

In this article:bom blast, Diksoochi news, Featured, latest news, news, rameshwaram cafe

Click to comment