Connect with us

Hi, what are you looking for?

Diksoochi News

ರಾಜ್ಯ

ಬಿಜೆಪಿ ಅಭ್ಯರ್ಥಿಗಳ 5 ನೇ ಪಟ್ಟಿ ಬಿಡುಗಡೆ; ಅನಂತ್ ಕುಮಾರ್ ಹೆಗಡೆಗಿಲ್ಲ ಟಿಕೆಟ್!

1

ನವದೆಹಲಿ : ಲೋಕಸಭಾ ಚುನಾವಣಾ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ 5ನೇ ಪಟ್ಟಿ ಘೋಷಿಸಿದೆ.

ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಲಾಗಿದೆ. ವಿರೋಧದ ನಡುವೆಯೂ ಶೆಟ್ಟರ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದಿಂದ ಡಾ. ಸುಧಾಕರ್‌ಗೆ ಟಿಕೆಟ್ ನೀಡಲಾಗಿದೆ. ರಾಯಚೂರಿನಿಂದ ರಾಜಾ ಅಮರೇಶ್ವರ್ ನಾಯಕ್ ಟಿಕೆಟ್ ಪಡೆದುಕೊಂಡಿದ್ದಾರೆ.
ಇದರೊಂದಿಗೆ ಭಾರಿ ಕುತೂಹಲ ಕೆರಳಿಸಿದ ಉತ್ತರ ಕನ್ನಡ ಕ್ಷೇತ್ರದಿಂದ ವಿಶ್ವೇಶ್ವರ ಹೆಗೆಡೆ ಕಾಗೇರಿಗೆ ಟಿಕೆಟ್ ಘೋಷಿಸಲಾಗಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ವಿವಾದಾತ್ಮಕ ಹೇಳಿಕೆ ಮೂಲಕ ಮುನ್ನೆಲೆಗೆ ಬಂದಿದ್ದ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಕೊಕ್ ನೀಡಲಾಗಿದೆ.

ಕರ್ನಾಟಕ ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿರುವ ಬಿಜೆಪಿ ಹೈಕಮಾಂಡ್ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ.

Advertisement. Scroll to continue reading.

ನವೀನ್ ಜಿಂದಾಲ್ ಕುರುಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಟ್ ನಟಿ ಕಂಗನಾ ರಣಾವತ್‌ಗೆ ಟಿಕೆಟ್ ನೀಡಲಾಗಿದೆ. ಇನ್ನು ಕೇರಳದ ವಯಾನಾಡು ಕ್ಷೇತ್ರದಿಂದ ಕೆ. ಸುರೇಂದ್ರನ್‌ಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಯನಾಡಿನಲ್ಲಿ ಕೆ.ಸುರೇಂದ್ರನ್  ಸ್ಪರ್ಧಿಸಲಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!