ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಯ ಡೆಡ್ಲೈನ್ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಆಯೋಗ ಇನ್ನೂ ಅಧಿಕೃತವಾಗಿ ಐವರು ವಿಜಯಿ ಆಗಿದ್ದಾರೆ ಎಂದು ಘೋಷಣೆ ಮಾಡಿಲ್ಲ. ಹಲವು ಕ್ಷೇತ್ರಗಳಲ್ಲಿ ವಿರೋಧ ಪಕ್ಷಗಳು ದುರ್ಬಲಗೊಂಡಿದ್ದು ಈ ಬಾರಿ ಆಡಳಿತ ಸರ್ಕಾರ ಕ್ಲೀನ್ ಸ್ವೀಪ್ ಮಾಡುವ ಸಾಧ್ಯತೆಯಿದೆ.
Advertisement. Scroll to continue reading.

ಚಿತ್ತವನ್ನು ತೋರಿಸುವಲ್ಲಿ ಅರುಣಾಚಲ ಪ್ರದೇಶ ಮುಂದಿದೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನ ಸಿಎಂ ನೇತೃತ್ವದಲ್ಲಿ ಬಿಜೆಪಿ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅಗಾಧ ಅಭಿವೃದ್ಧಿಯಾಗಿದೆ ಎಂದು ಬರೆದುಕೊಂಡಿದ್ದಾರೆ.
Advertisement. Scroll to continue reading.

In this article:arunachala Pradesh, bjp, Diksoochi news, Election, ಅರುಣಾಚಲ ಪ್ರದೇಶ, ಬಿಜೆಪಿ

Click to comment