Connect with us

Hi, what are you looking for?

Diksoochi News

ರಾಜ್ಯ

ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ರೇವಣ್ಣ!

0

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.

ಎಸ್ ಐ ಟಿ ಅಧಿಕಾರಿಗಳ ವಿಚಾರಣೆ ವೇಳೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಂದರ್ಭದಲ್ಲಿ ಎಚ್‌.ಡಿ.ರೇವಣ್ಣ ಅವರು ಮೂರು ನಿಂಬೆಹಣ್ಣು ಕೈಯಲ್ಲಿ ಹಿಡಿದುಕೊಂಡಿದ್ದರು. ಪೊಲೀಸ್ ವಾಹನದಿಂದ ಇಳಿದಿದ್ದ ರೇವಣ್ಣ, ನಿಂಬೆ ಹಣ್ಣುಗಳ ಸಮೇತ ನ್ಯಾಯಾಧೀಶರ ಮನೆಯತ್ತ ಹೆಜ್ಜೆ ಹಾಕಿದರು. ವಿಶೇಷ ಕೊಠಡಿಯಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೂ ರೇವಣ್ಣ ನಿಂಬೆ ಹಣ್ಣು ಬಿಟ್ಟಿರಲಿಲ್ಲ.

ವಿಚಾರಣೆ ವೇಳೆ ನ್ಯಾಯಾಧೀಶರ ಎದುರು ಕಣ್ಣೀರು ಹಾಕಿದ್ದ ರೇವಣ್ಣ, ‘ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರು ಈ ರೀತಿ ಮಾಡಿದ್ದಾರೆ. ನನಗೆ ನ್ಯಾಯ ಕೊಡಿ’ ಎಂದು ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.

Advertisement. Scroll to continue reading.

ನ್ಯಾಯಾಧೀಶರ ನಿವಾಸದಲ್ಲಿ ಎಚ್.ಡಿ. ರೇವಣ್ಣ ಪರ ವಕೀಲ ಮತ್ತು ಎಸ್ಐಟಿ ಅಧಿಕಾರಿಗಳ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರು, ರೇವಣ್ಣರನ್ನು ಮೇ 8ರ ವರೆಗೆ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ರಾಷ್ಟ್ರಮಟ್ಟದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಒಂದೆಡೆ ವಿದೇಶಕ್ಕೆ ಹಾರಿರುವ ಪ್ರಜ್ವಲ್​ ಬಂಧಿಸಲು ಎಸ್​ಐಟಿ ಅಧಿಕಾರಿಗಳು ಏರ್​ಪೋರ್ಟ್​ನಲ್ಲಿ ಕಾದು ಕುಳಿತಿದ್ದಾರೆ

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!