ಮಂಗಳೂರು : ಮಂಗಳೂರು ಹೊರ ವಲಯದ ತೊಕ್ಕೊಟ್ಟು ಜಂಕ್ಷನ್ನ ಬೇಕರಿ ಮುಂಭಾಗದಲ್ಲಿ ಪಾರ್ಕ್ ಮಾಡಿದ್ದ ಟೆಂಪೋವನ್ನು ಬದಿಗೆ ನಿಲ್ಲಿಸಲು ಹೇಳಿದ್ದಕ್ಕೆ ಹ*ಲ್ಲೆ ನಡೆಸಲು ಯತ್ನಿಸಿರುವ ಬಗ್ಗೆ ವರದಿಯಾಗಿದೆ.
ಟೆಂಪೋ ರಿಕ್ಷಾ ಚಾಲಕ, ಮತ್ತೋರ್ವ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಆತನ ತಾಯಿಗೆ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

ಮಾರುತಿ ಸ್ವೀಟ್ಸ್ ಮಾಲಕ ಅಶ್ವಿನ್ ಕುಮಾರ್ ಬೇಕರಿ ಮುಂಭಾಗ ಅಡ್ಡವಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾವನ್ನು ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ನಲ್ಲಿ ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಆತ ತನ್ನ ಸಹಚರ ರಿಕ್ಷಾ ಚಾಲಕ ಇಶಾನ್ನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ಗೆ ಹ*ಲ್ಲೆ ನಡೆಸಲು ಮುಂದಾಗಿದ್ದಾನೆ. ಬಶೀರ್ ಮತ್ತು ಇಶಾನ್ನೊಂದಿಗೆ ಮತ್ತೆ ಕೆಲವು ರಿಕ್ಷಾ ಚಾಲಕರು ದಾಂಧಲೆಗೆ ಕುಮ್ಮಕ್ಕು ನೀಡಿದ್ದಾರೆ.
ಬೇಕರಿಯೊಳಗಿದ್ದ ಅಶ್ವಿನ್ ಅವರ ತಾಯಿ ಮತ್ತು ಸಿಬ್ಬಂದಿ ಯುವತಿ ರಿಕ್ಷಾ ಚಾಲಕರನ್ನ ತಡೆದಿದ್ದು ಅವರನ್ನೂ ತಳ್ಳಿ ಹ*ಲ್ಲೆಗೆ ಮುಂದಾಗಿದ್ದಾರೆ. ಈ ಸಂದರ್ಭ ಪಕ್ಕದ ಹೊಟೇಲ್ ಮಾಲಕ ಮಧ್ಯ ಪ್ರವೇಶಿಸಿ ರಿಕ್ಷಾ ಚಾಲಕರನ್ನು ಅಂಗಡಿಯಿಂದ ಹೊರ ತಳ್ಳಿದ್ದಾರೆ.
ಘಟನೆಯ ದೃಶ್ಯ ಬೇಕರಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಬಗ್ಗೆ ಬಶೀರ್ ಮತ್ತು ಇಶಾನ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಲಾಗಿದೆ.

