Connect with us

Hi, what are you looking for?

Diksoochi News

ಕರಾವಳಿ

ಬೈಂದೂರು : ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದ ಕ್ರೂರಿ!

1

ಬೈಂದೂರು : ನಾಯಿಯೆಂದರೆ ಸಾಕು ಬಹಳಷ್ಟು ಮಂದಿಗೆ ಅಚ್ಚು ಮೆಚ್ಚು. ಮನೆ ಮಕ್ಕಳಂತೆ ಸಾಕುವವರಿದ್ದಾರೆ. ಆದ್ರೆ, ಇಲ್ಲೊಬ್ಬ ಕ್ರೂರಿ ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದಿದ್ದಾನೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಈ ಅಮಾನವೀಯ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

ಶನಿವಾರ ಸಂಜೆ ಈ ಘಟನೆ ನಡೆದಿದ್ದು, ತನ್ನ ಸಾಕು ನಾಯಿಯನ್ನೇ ಬೈಕಿಗೆ ಸರಪಣಿಯಿಂದ ಕಟ್ಟಿ ಪಾಪಿ ಬೈಂದೂರು ಪೇಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಳೆದೊಯ್ದಿದ್ದಾನೆ. ನಾಯಿಯನ್ನು ಎಳೆದೊಯ್ದ ರಭಸಕ್ಕೆ ನಾಯಿಯ ಕಾಲಿನಲ್ಲಿ ಗಾಯವಾಗಿ ರಕ್ತ ಸುರಿದಿದೆ.

Advertisement. Scroll to continue reading.

ಈ ದೃಶ್ಯ ಕಂಡು ಸಾರ್ವಜನಿಕರು ಸರಪಣಿ ಬಿಚ್ಚಿಸಿ ನಾಯಿಯ ಮಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಆರಂಭದಲ್ಲಿ ತನ್ನದೇ ನಾಯಿ ಎಂದು ಆತ ಉದ್ಧಟತನ ತೋರಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಬೈಂದೂರು ಪೊಲೀಸರು ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!