ಮಂಜೇಶ್ವರ : ಮೀನಿನ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪಳ ಗೇಟ್ ಬಳಿ ಇಂದು(ಮೇ.30) ಸಂಜೆ ನಡೆದಿದೆ.
ವರ್ಕಾಡಿ ಸಮೀಪದ ಕೋಳ್ಯೂರು ಪದವು ನಿವಾಸಿ ಮಹಿಳೆ ನವ್ಯ(24) ಮೃತಪಟ್ಟಿದ್ದಾರೆ. ಪತಿ ಪದ್ಮನಾಭ (36) ಹಾಗೂ ಮಗು ಗಾಯನ್ (2)ಗಂಭೀರ ಗಾಯಗೊಂಡಿದ್ದು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.

ಮಂಗಳೂರಿಗೆ ತೆರಳುತ್ತಿದ್ದ ಕಾರು ಮತ್ತು ಎದುರಿನಿಂದ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಗೆ ಮಗುಚಿ ಬಿದ್ದಿದೆ.
ಮೃತ ನವ್ಯಾ ತಲಪಾಡಿ ಗ್ಯಾರೇಜಿನ ಶಿವರಾಮ ಆಚಾರ್ಯ ಅವರ ಪುತ್ರಿ ಎಂದು ತಿಳಿದುಬಂದಿದೆ.
In this article:breaking news, Diksoochi news, Featured, heavy rain, Kasaragood, latest news, manjeshwara

Click to comment