Connect with us

Hi, what are you looking for?

Diksoochi News

Uncategorized

ಹಿರಿಯಡಕ : ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ಅತೀ ಅಗತ್ಯ – ಮುರಳೀಧರ ಉಪಾಧ್ಯ ಹಿರಿಯಡಕ

0

ಹಿರಿಯಡಕ : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್, ಗಣಿತದ ಅರಿವು ಅಗತ್ಯ. ಹಾಗೇ ಕಂಪ್ಯೂಟರ್ ಜ್ಞಾನ, ಸಾಮಾನ್ಯ ಜ್ಞಾನವೂ ಅತೀ ಅಗತ್ಯವಾಗಿದೆ. ಮುಂದಿನ ದಿನಗಳಲ್ಲಿ ಕಂಪೆನಿಗಳಿಗೆ ಉದ್ಯೋಗ ಅರಸಿ ಹೋಗುವವರಿಗೆ ಅಗತ್ಯವಾಗಿ ಕಂಪ್ಯೂಟರ್ ಶಿಕ್ಷಣ ಬೇಕು. ಮನೆಯಲ್ಲಿಯೇ ಕುಳಿತು ಕೆಲಸ ಮಾಡುವಂತಹ ಉದ್ಯೋಗವಕಾಶಗಳೇ ಮುಂದಿನ ದಿನಗಳಲ್ಲಿ ಹೆಚ್ಚಾಗಲಿದೆ ಎಂದು ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಮುರಳೀಧರ ಉಪಾಧ್ಯ ಹಿರಿಯಡಕ ಹೇಳಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಹಾಗೂ ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ಸಹಯೋಗದಲ್ಲಿ ಕೆ.ಪಿ.ಎಸ್.ಕಾಲೇಜು ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.



ಈ ಸಂದರ್ಭ ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ವತಿಯಿಂದ ಹಿರಿಯಡಕ ಬಾಲವಾಡಿ ಶಾಲಾ ಶಿಕ್ಷಕಿ ಸುಶೀಲಾ, ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಪೆರ್ಣಂಕಿಲರವರನ್ನು ಸನ್ಮಾನಿಸಲಾಯಿತು. ಈ ವೇಳೆ ನೃತ್ಯ ನಿಕೇತನ ಕೊಡವೂರು ಇದರ ಹಿರಿಯಡಕ ತರಗತಿಯ ವಿದ್ಯಾರ್ಥಿನಿಯರಿಂದ ಭರತ ನಾಟ್ಯ ಪ್ರದರ್ಶನ ನಡೆಯಿತು.

ಕಾಲೇಜು ಅಭಿವೃದ್ಧಿ ಸಮಿತಿಯ ಸಂಚಾಲಕರಾದ ಎನ್. ಎಸ್. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದ ಪ್ರಾಂಶುಪಾಲ ಮಂಜುನಾಥ ಭಟ್, ಉಪ ಪ್ರಾಂಶುಪಾಲೆ ಶ್ರೀಮತಿ ಶಾರದಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದೇವರಾಜ್ ಶಾಸ್ತ್ರಿ, ಟ್ರಸ್ಟ್ ನ ಮುರಳೀಧರ ಹಾಲಂಬಿ, ಯು. ದಾಮೋದರ್ ಮೊದಲಾದವರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!