ಮಂಗಳೂರು : ಹಡಗು ಡಿಕ್ಕಿಯಾಗಿ ಬೋಟ್ ನಲ್ಲಿದ್ದ ಮೂವರ ದುರ್ಮರಣ; 5 ಮಂದಿ ಮೀನುಗಾರರು ನಾಪತ್ತೆ
Published
0
ಮಂಗಳೂರು : ಬೋಟ್ ಗೆ ಹಡಗು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಲ್ಲಿ ನಡೆದಿದೆ. ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ ಈ ದುರಂತ ಸಂಭವಿಸಿದ್ದು, ಸೋಮವಾರ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೋಟ್ ನಲ್ಲಿ 14 ಮೀನುಗಾರರಿದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದು, 6 ಮಂದಿಯನ್ನು ರಕ್ಷಿಸಲಾಗಿದೆ. ಉಳಿದ 5 ಮಂದಿ ನಾಪತ್ತೆಯಾಗಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಂಡಿಯನ್ ಕೋಸ್ಟ್ ಗಾರ್ಡ್ , ಮೀನುಗಾರರನ್ನು ಹುಡುಕಲು 3 ICG ಹಡಗುಗಳು ಮತ್ತು ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದೆ.