ಆಂಧ್ರಪ್ರದೇಶ : ಒಂದೇ ಕುಟುಂಬದ ಆರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಶಾಖಪಟ್ಟಣಂ ಜಿಲ್ಲೆಯ ಪೆಂಡುರ್ತಿ ಮಂಡಲ್ ಎಂಬಲ್ಲಿ ನಡೆದಿದೆ. ಅಪ್ಪಲರಾಜು ಕೊಲೆಗೈದ ಆರೋಪಿ. ಈ ಕುಟುಂಬದ ವ್ಯಕ್ತಿಯೊಬ್ಬ ಅಪ್ಪಲರಾಜು ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಇದೇ ಸೇಡಿನಿಂದ ಆತ ಆರು ಮಂದಿಯ ಕೊಲೆಗೈದಿದ್ದಾನೆ ಎನ್ನಲಾಗಿದೆ. ಆದರೆ, ಅತ್ಯಾಚಾರ ಆರೋಪಿ ನಾಪತ್ತೆಯಾಗಿದ್ದು, ಇವರ ನಡುವೆ ಆಸ್ತಿ ವಿಚಾರವಾಗಿ ವೈಮನಸ್ಸಿತ್ತು ಎಂದು ತಿಳಿದುಬಂದಿದೆ. ಬುಧವಾರ ರಾತ್ರಿಯೂ ಇವರುಗಳ ನಡುವೆ ಆಸ್ತಿ ವಿಚಾರವಾಗಿ ಜಗಳ ನಡೆದಿತ್ತು ಎನ್ನಲಾಗಿದೆ. ಕೊಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದು, ತನಿಖೆ ಮುಂದುವರೆಸಿದ್ದಾರೆ.