ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಹಾವಳಿ ಹೆಚ್ಚುತ್ತಿದೆ. ಕೊರೋನಾ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರ ಈಗಾಗಲೇ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಿದ್ದಾರೆ. ಬಳಿಕ ಮಾತಾಡಿದ ಅವರು, 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಏಪ್ರಿಲ್ 20ರ ವರೆಗೂ ಮುಂದುವರೆಯಲಿದೆ. ರಾತ್ರಿ 10 ರಿಂದ ಬೆಳಿಗ್ಗೆ 6 ರ ವರಗೆ ನೈಟ್ ಕರ್ಫ್ಯೂ ಇರಲಿದ್ದು, ಇತರೆ ಜಿಲ್ಲೆಗಳಿಗೆ ನೈಟ್ ಕರ್ಫ್ಯೂ ವಿಸ್ತರಿಸುವ ಕುರಿತು ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. “ಏಪ್ರಿಲ್ 20 ರಂದು ಮತ್ತೊಮ್ಮೆ ಅಧಕಾರಿಗಳೊಂದಿಗೆ ಚರ್ಚಿಸಿ, ಕಫ್ರ್ಯೂ ಬಗ್ಗೆ ನಿರ್ಧಾರ ಮಾಡಲಾಗುವುದು.” ಎಂದಿದ್ದಾರೆ.