ಬೆಂಗಳೂರು : ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮೇ 15ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಾರ್ಕಳ, ಉಡುಪಿ, ಬೆಳ್ತಂಗಡಿ, ಶ್ರವಣ ಬೆಳಗೋಳ, ಪುತ್ತೂರಿನ ಕೆಲವೆಡೆ ಮಳೆಯಾಗಿದೆ.
ಹಲವೆಡೆ ಮಳೆ; ಎಲ್ಲೋ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ರಾಮನಗರ, ತುಮಕೂರಿನಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ವಿಜಯನಗರ, ಯಾದಗಿರಿ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಳಗಾವಿ, ರಾಯಚೂರಿನಲ್ಲಿ ಮಳೆಯಾಗಲಿದೆ.
Advertisement. Scroll to continue reading.