Connect with us

Hi, what are you looking for?

Diksoochi News

Uncategorized

ಬೈಂದೂರು : ಕೊರೋನಾ ಸೋಂಕಿತರ ಮನೆಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಭೇಟಿ

0

ವರದಿ : ದಿನೇಶ್ ರಾಯಪ್ಪನಮಠ

ಬೈಂದೂರು : ಶಿರೂರು ಭಾಗದ ಕೋಟೆಮನೆ, ನಾಗಿನಗದ್ದೆ ಪ್ರದೇಶದಲ್ಲಿ ಕೊರೋನಾ ಸೋಂಕಿತರ ಮನೆಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಶನಿವಾರ ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವುದರಿಂದ ಗ್ರಾಮೀಣ ಭಾಗದಲ್ಲಿನ ಸಿದ್ಧತೆ ಪರಿಶೀಲನೆ ಮತ್ತು ಸೋಂಕಿತರನ್ನು ಧೈರ್ಯ ತುಂಬಲು ನಾನು ಇಂದು ಖುದ್ದಾಗಿ ಮನೆಗಳಿಗೆ ಭೇಟಿ ನೀಡುತ್ತಿದ್ದೇನೆ. ಇನ್ನೂ ಆಕ್ಸಿಜನ್ ಸೇರಿದಂತೆ ಅಗತ್ಯವಿರುವ ಚಿಕಿತ್ಸೆ ತಕ್ಷಣದಲ್ಲಿ ದೊರೆಯಲಿದೆ. ಜನರಲ್ಲಿ ಯಾವುದೇ ಆತಂಕ ಬೇಡ. ಕೋರೋನಾ ಸೋಂಕಿತರು ಮನೆಯಲ್ಲಿ ಸರಿಯಾದ ಚಿಕಿತ್ಸೆ ಪಡೆಯಬೇಕು, ಯಾವುದೇ ನಿರ್ಲಕ್ಷತೆ ವಹಿಸಬಾರದು. ಕೋರೋನಾ ಸೋಂಕಿತರಿಗೆ ಉಸಿರಾಟದ ಸಮಸ್ಯೆ ಬಂದಲ್ಲಿ ತಕ್ಷಣವೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಮಾಹಿತಿ ನೀಡಬೇಕು ಎಂದರು.

Advertisement. Scroll to continue reading.

ಈ ಸಂದರ್ಭ ಕುಂದಾಪುರ ಸಹಾಯಕ ಕಮಿಷನರ್ ರಾಜು ಸಿ, ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ, ಶಿರೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ, ಬೈಂದೂರು ಕಂದಾಯ ನಿರೀಕ್ಷಕ ಮಂಜು, ಯಡ್ತರೆ ಗ್ರಾಮ ಲೆಕ್ಕಾಧಿಕಾರಿ ಮಂಜು ಬಿಲ್ಲವ, ಶಿರೂರು ಗ್ರಾಮ ಲೆಕ್ಕಾಧಿಕಾರಿ ಸತೀಶ್ ಹೋಬಳಿದಾರ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!