Connect with us

Hi, what are you looking for?

Diksoochi News

Uncategorized

ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದು ಅಗತ್ಯ : ಸುರೇಶ್ ಕುಮಾರ್

0


ಬೆಂಗಳೂರು : ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದು ಬಹಳ ಮುಖ್ಯ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದದ್ದು ಅನಿವಾರ್ಯವಾಗಿದೆ, ಕೋವಿಡ್ ಸಂಪೂರ್ಣವಾಗಿ ಹತೋಟಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕ ಎಂದರು.
ಇಂದು ನಡೆದ ಸಭೆಯಲ್ಲಿ ಪರೀಕ್ಷೆ ನಡೆಸುವುದಕ್ಕೆ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಆರೋಗ್ಯ ದೃಷ್ಠಿಯಿಂದ ಪರೀಕ್ಷೆಗಳನ್ನು ರದ್ದುಗೊಳಿಸುವುದಕ್ಕೆ ಸೂಚಿಸಿದ್ದವು. ಹೀಗಾಗಿ ಕೇಂದ್ರ ಮಂಡಳಿ 12ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಎರಡು ಆಯ್ಕೆ ನೀಡಿದ್ದು, ಒಂದು, 3 ಗಂಟೆ ಬದಲಿಗೆ ಅರ್ಧ ಗಂಟೆಗಳಲ್ಲಿ ಪರೀಕ್ಷೆ ನಡೆಸುವುದು. ಎರಡು, ಪರೀಕ್ಷೆ ನಡೆಸುವ ಬಗ್ಗೆ ಆಯಾ ರಾಜ್ಯ ಸರ್ಕಾರದ ಶಿಕ್ಷಣ ಮಂಡಳಿಯು ತೀರ್ಮಾನ ತೆಗೆದುಕೊಳ್ಳುವುದಕ್ಕೆ ಹೇಳಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!