ಕಾಪು : ಲಾಕ್ಡೌನ್ ನಿಯಮ ಉಲ್ಲಂಘಿಸಿ ಕ್ರಿಕೆಟ್ ಆಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ನೇತ್ರತ್ವದ ಪೊಲೀಸರ ತಂಡ ದಾಳಿ ನಡೆಸಿದ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ
ಉಚ್ಚಿಲ ಭಾಸ್ಕರ ನಗರದಲ್ಲಿ ಭಾನುವಾರ ನಡೆದಿದೆ.
ಉಚ್ಚಿಲದ ಆಸುಪಾಸಿನ ಹತ್ತು ಮಂದಿ
ಕ್ರಿಕೆಟ್ ಆಟದಲ್ಲಿ ತೊಡಗಿದ್ದು,ಇವರು
ಲಾಕ್ಡೌನ್ ವೇಳೆ ಅನಗತ್ಯ ಸಂಚಾರ ಮಾಡಿ ಒಂದೆಡೆ ಸೇರಿ ಕ್ರಿಕೆಟ್ ಆಡುತ್ತಿರುವುದು ಕಂಡು ಬಂದಿದೆ.ಅವರೆಲ್ಲರನ್ನು ವಿಚಾರಿಸಿದ ಪೋಲಿಸರು,ಅವರಲ್ಲಿದ್ದ ನಾಲ್ಕು ದ್ವಿಚಕ್ರ ವಾಹನಗಳು,ಒಂದು ಕಾರು, ಹಾಗೂ ಆಟಕ್ಕೆ ಬಳಸಿದ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
Advertisement. Scroll to continue reading.