ನವದೆಹಲಿ : ಕೇಂದ್ರ ತನಿಖಾ ತಂಡದ ನಿರ್ದೇಶಕರಾಗಿ ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥ, ಹಿರಿಯ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮುಖ್ಯ ನ್ಯಾಯಮೂರ್ತಿಗಳು ನಡೆಸಿದ ಮಹತ್ವದ ಸಭೆಯ ಬಳಿಕ ಕೇಂದ್ರ ತನಿಖಾ ತಂಡಕ್ಕೆ ಹೊಸ ನಿರ್ದೇಶಕರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಮುಂದಿನ ಎರಡು ವರ್ಷಗಳ ಕಾಲ ಕೇಂದ್ರ ತನಿಖಾ ತಂಡದ ನಿರ್ದೇಶಕರಾಗಿ ಸೇವೆ ಸಲ್ಲಿಸಲಿದ್ದಾರೆ.
ಸುಬೋಧ್ ಕುಮಾರ್ ಜೈಸ್ವಾಲ್ 1985 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದು, ಮಹಾರಾಷ್ಟ್ರದಲ್ಲಿ ಪೊಲೀಸ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.