ಕುಂದಾಪುರ : ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಿಟ್ ವಿತರಣೆ
Published
0
ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇವರ ವತಿಯಿಂದ ಜಡ್ಕಲ್ ಗ್ರಾಮ ಪಂಚಾಯತ್ ಮುಖಾಂತರ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್, ಅಗತ್ಯವಾದ ಮಾತ್ರೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಂ.ವಿಜಯ ಶಾಸ್ತ್ರಿ,ಉಪಾಧ್ಯಕ್ಷರಾದ ನಕ್ಷತ್ರ ಬೋವಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಪ್ರಭಾಕರ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷರಾದ ಲಕ್ಷ್ಮಣ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ರುಕ್ಕನ ಗೌಡ, ಗ್ರಾಮ ಲೆಕ್ಕಾಧಿಕಾರಿ ವಿರೇಶ್, ಕಾರ್ಯದರ್ಶಿ ಸರೋಜ ಮತ್ತು ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.