ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಬಾರಕೂರು ಹನೆಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂರಾಡಿಯಲ್ಲಿ ಒಂದೇ ಕಡೆ 6 ಮನೆಗಳಲ್ಲಿ ಹೋಮ್ ಐಸೋಲೇಶನ್ ನಲ್ಲಿ ಇರುವ ಮನೆಗಳಿಗೆ ಗುರುವಾರ ಬ್ರಹ್ಮಾವರ ತಹಶೀಲ್ದಾರ ಕಿರಣ್ ಗೌರಯ್ಯ ಭೇಟಿ ನೀಡಿದರು. ಅವರ ಕಷ್ಟ ಸುಖ, ಆರೋಗ್ಯ ವಿಚಾರಿಸಿ ಕೋವಿಡ್ ನಿಯಮ ಪಾಲನೆ ಮಾಡಲು ಸೂಚಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಅರುಂಧತಿ ಏಸುಮನೆ, ಕಾರ್ಯದರ್ಶಿ ಉಮೇಶ್ ಕಲ್ಯಾಣಪುರ, ಗ್ರಾಮ ಪಂಚಾಯತಿ ಸದಸ್ಯ ಚಂದ್ರ ಮರಕಾಲ, ಕೋವಿಡ್ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಗ್ರಾಮ ಲೆಕ್ಕಿಗ ಭೀಮರಾಜ್ ಹೊರಟ್ಟಿ ಹಾಜರಿದ್ದರು.
Advertisement. Scroll to continue reading.