Connect with us

Hi, what are you looking for?

Diksoochi News

Uncategorized

ಉಡುಪಿ: ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್

0

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ತಡೆಯುವುದು ಅವಶ್ಯವಕವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಅವಶ್ಯಕ ಚಟುವಟಿಕೆಗಳನ್ನು ಹೊರತು ಪಡಿಸಿ, ಇತರೆ ಉದ್ದೇಶಗಳಿಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಈ ಸಂದರ್ಭದಲ್ಲಿ ಯಾವುದೇ ಮೈಕ್ರೋಫೈನಾನ್ಸ್‍ಗಳು/ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿದಾರರು, ಮನೆ ಮನೆಗೆ ಭೇಟಿ ನೀಡುವುದನ್ನು ಜೂನ್ 6 ರವರೆಗೆ ನಿರ್ಬಂಧಿಸಲಾಗಿದೆ.
ಯಾವುದೇ ಮೈಕ್ರೋಫೈನಾನ್ಸ್‍ಗಳು/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ಸಾಲ ಮರು ಪಾವತಿ ಮಾಡಲು ಒತ್ತಡ ಹೇರುವಂತಿಲ್ಲ, ಅಲ್ಲದೇ ಸಾಲ ಮರುಪಾವತಿ ಮಾಡಲು ಒತ್ತಡ ಹೇರಿದ್ದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಲು ನೋಡೆಲ್ ಅಧಿಕಾರಿಗಳನ್ನಾಗಿ , ರುದ್ರೇಶ್ ಡಿ.ಸಿ ಲೀಡ್ ಡಿಸ್ಟ್ರಿಕ್ಟ್ ಮ್ಯಾನೆಜರ್, 9449860858, ಪ್ರವೀಣ್ ಬಿ.ನಾಯಕ್, ಸಹಕಾರ ಸಂಘಗಳ ಉಪನಿಬಂಧಕರು 9448633338 ಇವರನ್ನು ನೇಮಿಸಲಾಗಿದೆ.
ಈ ನೋಡೆಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾದ ಸಾಲ ಮರುಪಾವತಿ ಕುರಿತು ದೂರುಗಳಿಗೆ ತಕ್ಷಣವೇ ಸ್ಪಂದಿಸುವುದು ಮೈಕ್ರೋ ಫೈನಾನ್ಸ್‍ಗಳು/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಹಾಗೂ ಸಾರ್ವಜನಿಕರ ಮಧ್ಯೆ ಸಮನ್ವಯತೆಯಿಂದ ಯಾವುದೇ ಗೊಂದಲ/ ಸಂಘರ್ಷ ಉಂಟಾಗದಂತೆ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ನೀಡುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!