Connect with us

Hi, what are you looking for?

Diksoochi News

Uncategorized

ಸಚಿವ ಕೋಟ ಮನವಿಗೆ ಸ್ಪಂದಿಸಿದ ಸಿಎಂ ಬಿ ಎಸ್ ವೈ; ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ ವ್ಯಾಕ್ಸಿನ್ ನೀಡಲು ಮೊದಲ ಆದ್ಯತೆ

0

ಗ್ರಾಮ ಪಂಚಾಯತ್ ಮತ್ತು ನಗರಾಡಳಿತ ಸಂಸ್ಥೆಯ ಸ್ಥಳೀಯಾಡಳಿತ ಪ್ರತಿನಿಧಿಗಳನ್ನು ಕೋರೊನಾ ವಾರಿಯರ್ ಎಂದು ಗುರುತಿಸಿ ಕೋರೊನಾ ವ್ಯಾಕ್ಸಿನ್ ನೀಡುವ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮನವಿಯನ್ನು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪನವರು ಪುರಸ್ಕರಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 6,020ಕ್ಕೂ ಮಿಕ್ಕಿ ಗ್ರಾಮ ಪಂಚಾಯತ್‌ಗಳಿದ್ದು, ಎಲ್ಲಾ ಗ್ರಾಮಗಳೂ ಸೇರಿ 95,000ಕ್ಕೂ ಹೆಚ್ಚು ಪಂಚಾಯತ್ ಸದಸ್ಯರುಗಳಿದ್ದಾರೆ. ಪ್ರತಿ ಗ್ರಾಮ ಪಂಚಾಯತಗಳಲ್ಲಿ ಈಗ ಕೋವಿಡ್ ಕಾರ್ಯಪಡೆಯನ್ನು ರಚನೆ ಮಾಡಲಾಗಿದ್ದು, ಪ್ರತಿನಿತ್ಯವೂ ಸಭೆ ಸೇರಿ ಜನರ ಮಧ್ಯೆ ಸಂಪರ್ಕದಲ್ಲಿರುವುದು ಅವಶ್ಯವಾಗಿರುತ್ತದೆ. ಅಲ್ಲದೆ ಪ್ರತಿ ವಾರ್ಡಿನಲ್ಲಿರುವ ಮನೆ ಮನಗೂ ವಾರ್ಡಿನ ಸದಸ್ಯರು ಭೇಟಿನೀಡಬೇಕೆಂದೂ ಹಾಗೂ ಪಂಚಾಯತ್‌ನ ಅಧ್ಯಕ್ಷರು, ಉಪಾಧ್ಯಕ್ಷರು ಇಡೀ ಗ್ರಾಮವನ್ನು ಗಮನಿಸಬೇಕೆ೦ದು ಈಗಾಗಲೇ ಸರಕಾರ ನಿರ್ಧರಿಸಿದಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ನ ಕಾರಪಡೆಗಳು ಕರ್ತವ್ಯ ನಿರ್ವಹಿಸುತ್ತಿದೆ. ಅದೇ ರೀತಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಮಹಾನಗರ ಪಾಲಿಕೆ, ನಗರ ಪಂಚಾಯತ್‌ಗಳು ಸೇರಿದಂತೆ ಇಡೀ ರಾಜ್ಯದಲ್ಲಿರುವಂತಹ ಎಲ್ಲಾ ನಗರಾಡಳಿತ ಸಂಸ್ಥೆಗಳ ಸದಸ್ಯರು ಕೂಡ ನಿತ್ಯ ಬಡವರ ಮನೆಯಲ್ಲಿ ನಿಂತುಕೊಂಡು ಕೋರೊನ ಪೀಡಿತರನ್ನು ಭೇಟಿ ಮಾಡಿ ಪ್ರತಿನಿತ್ಯ ಕರ್ತವ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ತರುವಂತಹ ಕಾಠ್ಯಕ್ರಮದಲ್ಲಿ ತಲ್ಲೀನರಾಗಿದ್ದಾರೆ. ಇವರೆಲ್ಲರಿಗೂ ಕೂಡ ಕೋರೋನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುವ ಕೊರೊನಾ ವಾರಿಯರ್‌ಗೆ ಕೊಟ್ಟಂತಹ ಪ್ರಾಶಸ್ತ್ರವನ್ನು ಕೊಟ್ಟು ವ್ಯಾಕ್ಸಿನ್‌ಗಳನ್ನು ನೀಡಲು ಸೂಕ್ತ ಆದೇಶವನ್ನು ನೀಡುವಂತೆ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜ್ಯದಾದ್ಯಂತ ಇರುವ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳಿಗೆ ವ್ಯಾಕ್ಸಿನ್ ನೀಡಲು ಆದೇಶಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!