ವರದಿ : ಶಫೀ ಉಚ್ಚಿಲ
ಕಾಪು : ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್
ನಿಯಂತ್ರಣಕ್ಕೆ ತರುವ ಹಿನ್ನೆಲೆ ಸರಕಾರ ಘೋಷಿಸಿರುವ ಲಾಕ್ಡೌನ್ ಮಾರ್ಗಸೂಚಿ ಉಲ್ಲಂಘಿಸಿ ರಸ್ತೆಗಿಳಿದ ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಕಾಪು ಪೊಲೀಸ್ ವೃತ್ತ ವ್ಯಾಪ್ತಿಯಲ್ಲಿ ಹೆಚ್ಚಿನ ವಾಹನ ಸಂಚಾರ ಕಂಡು ಬರುವ
ಕಾಪು, ಪಡುಬಿದ್ರಿ, ಉಚ್ಚಿಲದಲ್ಲಿ ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ನೇತ್ರತ್ವದ ಅಧಿಕಾರಿಗಳ ತಂಡ ಖುದ್ದು ಉಪಸ್ಥಿತರಿದ್ದು, ತುರ್ತು ಹಾಗೂ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ಸಕಾರಣವಿಲ್ಲದೆ ಅನಗತ್ಯವಾಗಿ ತಿರುಗಾಡುತ್ತಿದ್ದ ವಾಹನಗಳ ದಾಖಲೆಗಳನ್ನು ತಪಾಸಣೆಗೊಳಪಡಿಸಿದ ಪೊಲೀಸರು ವಾಹನ ಸವಾರರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿ, ವಾಪಾಸ್ ಕಳುಹಿಸಿದರು.
Advertisement. Scroll to continue reading.
