ಬೆಂಗಳೂರು : ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನಡುವಿನ ಜಟಾಪಟಿಗೆ ವರ್ಗಾವಣೆಯ ಮದ್ದನ್ನು ಕಂಡುಕೊಳ್ಳಲಾಗಿದೆ. ಡಿಸಿ ರೋಹಿಣಿ ಸಿಂಧೂರಿಯವರನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. 2020 ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವ ಮೊದಲು ರೋಹಿಣಿ ಇದೇ ಇಲಾಖೆಯ ಆಯುಕ್ತರಾಗಿದ್ದರು.
ಶಿಲ್ಪಾ ನಾಗ್ ರನ್ನು ಆರ್ ಡಿ & ಪಿ ಆರ್, ಬೆಂಗಳೂರು ಹುದ್ದೆಗೆ ನೇಮಕ ಮಾಡಲಾಗಿದೆ. ಶನಿವಾರ ತಡರಾತ್ರಿ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ನೇಮಕ ಮಾಡಲಾಗಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ನೇಮಕ ಮಾಡಲಾಗಿದೆ.
Advertisement. Scroll to continue reading.

In this article:DC Rohini Sindhuri, Diksoochi news, diksoochi Tv, diksoochi udupi, mysore, Shilpa nag

Click to comment