Connect with us

Hi, what are you looking for?

Diksoochi News

ರಾಜ್ಯ

ಸಿಎಂ ವಿರುದ್ಧ ವೃಥಾ ಆರೋಪ; ಉತ್ತಮ ರೀತಿಯಲ್ಲಿ ಕೋವಿಡ್ ಬಿಕ್ಕಟ್ಟು ನಿರ್ವಹಿಸುತ್ತಿದ್ದಾರೆ : ಅರುಣ್ ಸಿಂಗ್

0

ಸಿಎಂ ಬಿ ಎಸ್ ವೈ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ. ಕೊರೋನಾ ಮೃತರಿಗೆ ಒಂದು ಲಕ್ಷ ಪರಿಹಾರ ಘೋಷಿಸಿದ್ದಾರೆ. ಹಗಲಿರುಳು ಶ್ರಮಿಸುತ್ತಿದ್ದಾರೆ. ಕಾಂಗ್ರೆಸ್ ಕೆಲಸ ಮಾಡದೇ ಕಾಲ ಕಳೆಯುತ್ತಿದೆ. ಕೊರೋನಾ ಸಮಯದಲ್ಲಿ ಜೆಡಿಎಸ್ ಕ್ವಾರಂಟೈನ್ ಆಗಿತ್ತು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿಗೆ ಆಗಮಿಸಿರುವ ಅರುಣ್ ಸಿಂಗ್ ಮಾಧ್ಯಮದವರಲ್ಲಿ ಈ ಮಾತನ್ನು ಹೇಳಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕೊರೋನಾ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಲು ಮೂರು ದಿನಗಳ ಪ್ರವಾಸ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಅರುಣ್ ಸಿಂಗ್ ಕರ್ನಾಟಕ ಪ್ರವಾಸ ಅತ್ಯಂತ ಕುತೂಹಲ ಕೆರಳಿಸಿದೆ. ರಾಜ್ಯ ನಾಯಕತ್ವ ಬದಲಾವಣೆಯ ವಿಚಾರದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಅರುಣ್ ಸಿಂಗ್ ಆಗಮನವಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!