ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಯಾವುದೇ ಗೊಂದಲವಿಲ್ಲ. ಒಬ್ಬಿಬ್ಬರ ಹೇಳಿಕೆಯಿಂದ ತಪ್ಪು ಗ್ರಹಿಕೆಯಾಗಿದೆ. ಅಂತಹ ಒಬ್ಬಿಬ್ಬರನ್ನು ಕರೆದು ಮಾತಾಡುವೆ. ಒಟ್ಟಾಗಿ, ಒಂದಾಗಿ ಅಭಿವೃದ್ಧಿ ಕೆಲಸ ಮಾಡಲಿದ್ದೇವೆ. ವಿಜಯೇಂದ್ರ ಬಗೆಗಿನ ಆರೋಪ ಆಧಾರ ರಹಿತ. ವಿಶ್ವನಾಥ್ ಹೇಳಿಕೆ ಬಗ್ಗೆ ಹೈಕಮಾಂಡ್ ಯೋಚನೆ ಮಾಡುತ್ತೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮುಂಗಾರು ಪ್ರಾರಂಭವಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಡಿಸಿ ಜೊತೆ ನಾಳೆ ಚರ್ಚೆ ನಡೆಸಲಿದ್ದೇವೆ ಎಂದು ಅವರು ಹೇಳಿದರು.
Advertisement. Scroll to continue reading.