ವರದಿ : ದಿನೇಶ್ ರಾಯಪ್ಪನಮಠ
ಉಡುಪಿ : ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಛೇರಿಯಿಂದ ಡಿಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮನವಿ ಸ್ವೀಕರಿಸಿದರು.
ಪೆಟ್ರೋಲ್, ಡಿಸೇಲ್, ಗೊಬ್ಬರ, ದಿನಬಳಕೆ ವಸ್ತುಗಳ ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು. ಕೋವಿಡ್ ನಿಂದ ಮೃತಪಟ್ಟವರಿಗೆ ಒಂದು ಲಕ್ಷದಿಂದ 5 ಲಕ್ಷಕ್ಕೆ ಏರಿಸಬೇಕು. ವಿದ್ಯುತ್ ದರವನ್ನು ಇಳಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಅಲ್ಪಸಂಖ್ಯಾತರ ಜೆಡಿಎಸ್ ಅಧ್ಯಕ್ಷ ಮನ್ಸೂರ್ ಇಬ್ರಾಹಿಂ, ಕುಂದಾಪುರ ಕಾರ್ಯಧ್ಯಕ್ಷ ಹುಸೈನ್ ಹೈಕಾಡಿ, ರಮೇಶ್ ಕುಂದಾಪುರ, ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರಿ, ಇಕ್ಬಾಲ್ ಆತ್ರಾಡಿ, ವೆಂಕಟೇಶ್ ಪಡುಬಿದ್ರೆ ಮೊದಲಾದವರು ಭಾಗವಹಿಸಿದ್ದರು.
Advertisement. Scroll to continue reading.

In this article:Diksoochi news, diksoochi Tv, diksoochi udupi, Jds protest, Udupi Jds

Click to comment