Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಸಾಮಾಜಿಕ ಭದ್ರತಾ ಯೋಜನೆಯಡಿ ‘ವಿಮಾ ಸೌಲಭ್ಯ ಸಪ್ತಾಹ’ ಕಾರ್ಯಕ್ರಮಕ್ಕೆ ಚಾಲನೆ

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಹೆಬ್ರಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಹೆಬ್ರಿಯ ರಾಷ್ಟ್ರೀಕೃತ ಬ್ಯಾಂಕ್ ಗಳ ಸಹಯೋಗದೊಂದಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ವಿಮಾ ಸೌಲಭ್ಯ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ದೀಪ ಬೆಳಗಿಸಿ ಕಾರ್ಯಕ್ರಮ ಉಧ್ಘಾಟಿಸಿದರು.
ಶಿಬಿರದಲ್ಲಿ ಬ್ಯಾಂಕ್ ಆಫ್ ಬರೋಡ ಹೆಬ್ರಿ ವ್ಯವಸ್ಥಾಪಕ ಶಿವಪ್ರಸಾದ್ ಅವರು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಮತ್ತು ಸುರಕ್ಷಾ ಭೀಮಾ ಯೋಜನೆ, ಅಟಲ್ ಪಿಂಚಣಿಯ ಬಗ್ಗೆ ಮಾಹಿತಿ ನೀಡಿದರು. ಪಿ.ಡಿ.ಓ ಸದಾಶಿವ ಸೇರ್ವೆಗಾರ್ ಕಾರ್ಯಕ್ರಮ ಉದ್ದೇಶದ ಬಗ್ಗೆ ಪ್ರಸ್ತಾವಿಕ ಮಾತನಾಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಮಾರ್. ಹೆಚ್, ಸ್ಥಾಯಿ ಸಮಿತಿ ಅಧ್ಯಕ್ಷ ಕ್ರಷ್ಣ ನಾಯ್ಕ್, ಗ್ರಾಮ ಪಂಚಾಯತ್ ಪೂರ್ವಧ್ಯಕ್ಷ ಸುಧಾಕರ್ ಹೆಗ್ಡೆ, ಸದಸ್ಯರುಗಳಾದ ಜನಾರ್ದನ ಹೆಚ್, ಸಂತೋಷ್ ನಾಯಕ್, ಎಚ್.ಬಿ.ಸುರೇಶ್, ಪಿ.ಡಿ.ಓ ಸದಾಶಿವ ಸೇರ್ವೆಗಾರ್, ಕಾರ್ಯದರ್ಶಿ ದೇವಕಿ. ಉಪಸ್ಥಿತರಿದ್ದರು.
ಶಿಬಿರದಲ್ಲಿ ಯೂನಿಯನ್ ಬ್ಯಾಂಕ್, ಕೆನರಾ ಬ್ಯಾಂಕ್(2 ಶಾಖೆ), ಬ್ಯಾಂಕ್ ಆಫ್ ಬರೋಡ, ಎಸ್.ಬಿ.ಐ, ಎಸ್ ಸಿ ಡಿ ಸಿ ಸಿ ಬ್ಯಾಂಕ್ ಪ್ರತಿನಿಧಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.
ಪ್ರಸಾದ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!