Connect with us

Hi, what are you looking for?

Diksoochi News

ರಾಜ್ಯ

ಕಾರವಾರ : ಕಾಸರಕೋಡಿನ ವಾಣಿಜ್ಯ ಬಂದರು ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತೆ ಆರಂಭ; ಮೀನುಗಾರರಿಂದ ಆತ್ಮಹತ್ಯೆಗೆ ಯತ್ನ

0

ಕಾರವಾರ : ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹೊನ್ನಾವರದ ಕಾಸರಕೋಡಿನ ವಾಣಿಜ್ಯ ಬಂದರು ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತೆ ಪೊಲೀಸ್ ಭದ್ರತೆಯಲ್ಲಿ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಆತಂಕಗೊಂಡ  ಮೀನುಗಾರರು, ಬೃಹತ್ ಪ್ರತಿಭಟನೆ ನಡೆಸಿದ್ದಲ್ಲದೇ ಯುವಕರು ಸಮುದ್ರಕ್ಕೆ ಹಾರಿ ಸಾಮೂಹಿಕ ಆತ್ಮಹತ್ಯೆ ನಡೆಸಲು ಯತ್ನಿಸಿರುವ ಘಟನೆ ಶನಿವಾರ ನಡೆದಿದೆ. ಹೊನ್ನಾವರ ತಾಲ್ಲೂಕಿನ ಕಾಸರಕೊಡು ಟೊಂಕಾ ಭಾಗದ ಶರಾವತಿ ನದಿ ಅಳಿವೆ ಪ್ರದೇಶದಲ್ಲಿ ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ಎಚ್ ಪಿಪಿಎಲ್ ಕಂಪನಿ ವಾಣಿಜ್ಯ ಬಂದರು ನಿರ್ಮಿಸುತ್ತಿದೆ. ಸರ್ಕಾರ ವಾಣಿಜ್ಯ ಬಂದರು ನಿರ್ಮಾಣಕ್ಕೆ 93 ಎಕರೆ  ಮಂಜೂರು ಮಾಡಿದೆ. ಕೆಲವು ತಿಂಗಳ ಹಿಂದೆ ವಾಣಿಜ್ಯ ಬಂದರು ಕಾಮಗಾರಿ ಪ್ರಾರಂಭಿಸಿದ್ದ ಕಂಪನಿ ಸ್ಥಳೀಯರ ವಿರೋಧದಿಂದ ಸ್ಥಗಿತಗೊಳಿಸಿತ್ತು. ಆದರೆ ಶನಿವಾರ ಬೆಳ್ಳಂಬೆಳಿಗ್ಗೆ ಮತ್ತೆ ಸಾವಿರಾರು ಪೊಲೀಸರ ಭದ್ರತೆಯಲ್ಲಿ ಕಾಮಗಾರಿ ನಡೆಸಲು ಮುಂದಾಗಿದ್ದು, ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಳಗ್ಗೆಯಿಂದಲೇ ಸುರಿಯುವ ಮಳೆಯನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕಾಮಗಾರಿ ಸ್ಥಗಿತಗೊಳಿಸದ ಹಿನ್ನೆಲೆಯಲ್ಲಿ ಕೆಲವು ಯುವಕರು ಸಮುದ್ರಕ್ಕೆ ಹಾರಲು ಯತ್ನಿಸಿದ ಘಟನೆ ಕೂಡ ನಡೆದಿದೆ. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಯುವಕರನ್ನು ತಡೆದಿದ್ದು, ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!