Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಮಗುವಿಗೆ ಸಾಮಾಜಿಕ ಜಾಲತಾಣದ ಮೂಲಕ ಸಂಗ್ರಹಿಸಿದ ಹಣ ಹಸ್ತಾಂತರ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಕಾಡೂರು ಗ್ರಾಮದ ಮುಂಡಾಡಿ ಬಡಾಬೆಟ್ಟು ಯುಕ್ತಿ ಶೆಟ್ಟಿ (9) ಎಂಬ ಮಗು ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದೆ. ಕುಟುಂಬದ ಸಂಕಷ್ಟ ಕಂಡ ಬಿಲ್ಲಾಡಿ ಗ್ರಾಮಪಂಚಾಯತ್ ಮಾಜಿ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಅವರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣವಾದ Milaap ಆಪ್ ಮುಖಾಂತರ ಹಾಗೂ ವಿವಿಧ ದಾನಿಗಳ ಮೂಲಕ ಒಗ್ಗೂಡಿಸಿದ 1.52 ಲಕ್ಷ ಮೊತ್ತವನ್ನು ಯುಕ್ತಿ ಶೆಟ್ಟಿಯ ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಸಂತೋಷ್ ಶೆಟ್ಟಿ ಮುಂಡಾಡಿ, ವಿಶ್ವಜ್ಞಾನ ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯ ಸುಧೀರ್ ಶೆಟ್ಟಿ ಮುಂಡಾಡಿ ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!