ಬೆಂಗಳೂರು: ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದು ನಟ-ನಿರ್ದೇಶಕ ಸೂರ್ಯೋದಯ ಅವರ ಪುತ್ರ ಮತಪಟ್ಟಿದ್ದಾರೆ. ಸೂರ್ಯೋದಯ ಪುತ್ರ ಮಯೂರ್ (20) ಮೃತ ಯುವಕ.
ಕಳೆದ ರಾತ್ರಿ ಮಯೂರ್ ಕೆಟಿಎಂ ಬೈಕ್ ನಲ್ಲಿ ತೆರಳುತ್ತಿದ್ದಾಗ, ಟ್ಯಾಂಕರ್ ಗಾಡಿಗೆ ಡಿಕ್ಕಿ ಹೊಡೆದು ಅಪಘಾತ ಉಂಟಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೂರ್ಯೋದಯ್ ಪೆರಂಪಳ್ಳಿ ಕನ್ನಡ ಧಾರವಾಹಿ, ಸಿನಿಮಾಗಳಲ್ಲಿ ನಟಿಸಿದ್ದಾರೆ. ದೇಯಿ ಬೈದೆತಿ ಎಬ ತುಳು ಚಿತ್ರವನ್ನು ನಿರ್ದೇಶಿಸಿದ್ದಾರೆ.
Advertisement. Scroll to continue reading.