ಚಂದನವನ : ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ರವಿವಾರ ಅಖಿಲಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕೋವಿಡ್ ಕಾರಣದಿಂದಾಗೀ ಕುಟುಂಬಸ್ಥರು, ಆಪ್ತರು ಮಾತ್ರ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದರು.ಅಗಸ್ಟ್ 15 ರಂದು ದಾಂಪತ್ಯ ಜೀವ ನಕ್ಕೆ ಪದಾರ್ಪಣೆ ಮಾಡಲಿದ್ದಾರೆ.
2014ರ ಮಂಸೋರೆ ನಿರ್ದೇಶನದ ‘ಹರಿವು’ ಚಿತ್ರ ತೆರೆಕಂಡಿತ್ತು. ಈ ಚಿತ್ರಕ್ಕೆ ಪ್ರಾದೇಶಿಕ ಸಿನಿಮಾ ರಾಷ್ಟ್ರ ಪ್ರಶಸ್ತಿ ದೊರಕಿತು. ‘ಹರಿವು’ ಸಿನಿಮಾದಲ್ಲಿ ಸಂಚಾರಿ ವಿಜಯ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಇವರ ನಿರ್ದೇಶನದ ‘ನಾತಿಚರಾಮಿ’ ಕೂಡ
ಪ್ರಾದೇಶಿಕ ಸಿನಿಮಾ ರಾಷ್ಟ್ರ ಪ್ರಶಸ್ತಿ ದೊರಕಿದ್ದು, ಶ್ರುತಿ ಹರಿಹರನ್, ಸಂಚಾರಿ ವಿಜಯ್, ಶರಣ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
Advertisement. Scroll to continue reading.

ಇತ್ತೀಚಿಗಷ್ಟೆ ‘ಆಕ್ಟ್ 1978’ ಸಿನಿಮಾ ನಿರ್ದೇಶಿಸಿದ್ದರು. ಈ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಮಂಸೋರೆ ಸದ್ಯಕ್ಕೆ ‘ರಾಣಿ ಅಬ್ಬಕ್ಕ’ ಚಿತ್ರದ ತಯಾರಿಯಲ್ಲಿದ್ದಾರೆ.