Connect with us

Hi, what are you looking for?

Diksoochi News

ಕರಾವಳಿ

ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟಕದ ನಾಲ್ವರು ಸಂಸದರಿಗೆ ಸ್ಥಾನ; ಶೋಭಾ ಕರಂದ್ಲಾಜೆ ಸೇರಿದಂತೆ ನಾಲ್ವರಿಗೆ ಒಲಿದ ಅದೃಷ್ಟ

0

ನವದೆಹಲಿ : ಕೇಂದ್ರ ಸಚಿವ ಸಂಪುಟ ಸಭೆ ವಿಸ್ತರಣೆಯಾಗಿದೆ. ಕರ್ನಾಟಕದ ಮೂವರು ಸಂಸದರು ಪ್ರಧಾನಿ ಮೋದಿ ಕ್ಯಾಬಿನೆಟ್ ಸೇರಿದ್ದಾರೆ. ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ ಲಭಿಸಿದೆ. 2 ಬಾರಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದಾರೆ ಶೋಭಾ ಕರಂದ್ಲಾಜೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವೆಯಾಗಿ, ಇಂಧನ ಸಚಿವೆಯಾಗಿದ್ದರು. ಒಕ್ಕಲಿಗ ಕೋಟದಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.

ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಅವರಿಗೂ ಈ ಬಾರಿ ಅದೃಷ್ಟ ಖುಲಾಯಿಸಿದ್ದು, ಮೋದಿ ಕ್ಯಾಬಿನೆಟ್ ಸೇರಿದ್ದಾರೆ. ಅನೇಕಲ್ ನಿಂದ 4 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಕಣಕ್ಕೆ ಇಳಿದು ಗೆದ್ದಿದ್ದಾರೆ.

ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಅವರೂ ಮೋದಿ ಸಚಿವ ಸಂಪುಟ ಸೇರಿದ್ದಾರೆ. ಮೂರನೇ ಬಾರಿ ರಾಜ್ಯಸಭೆ ಸದಸ್ಯರಾಗಿರುವ ಅವರು, ಪುದುಚೇರಿ ಗೆಲುವಿನ ರೂವಾರಿ ಆಗಿದ್ದರು. ಲಿಂಗಾಯತ ಕೋಟದಡಿಯಲ್ಲಿ ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ. ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!