ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಹೆಬ್ರಿಯ ಮಣ್ಣು ಗೋಪಾಲ ಭಂಡಾರಿಯವರಿಗೆ ಎಲ್ಲವನ್ನೂ ನೀಡಿದೆ ಮಣ್ಣಿನ ಋುಣದಿಂದ ಜನಸೇವೆ ಮಾಡಿ ಎತ್ತರಕ್ಕೆ ಏರಿ ಜನರ ಮನಸ್ಸಿನಲ್ಲಿ ನೆಲೆ ಆಗಿದ್ದಾರೆ. ನಿಷ್ಠೆ ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಅದು ಗೋಪಾಲ್ ಭಂಡಾರಿ. ಅವರೊಬ್ಬ ಅನರ್ಘ್ಯ ರತ್ನ ಎಂದು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಹೇಳಿದರು. ಅವರು ಹೆಬ್ರಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬುಧವಾರ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಮತ್ತು ಅಭಿಮಾನಿಗಳಿಂದ ಜನನಾಯಕ ಮಾಜಿ ಶಾಸಕ ದಿವಂಗತ ಗೋಪಾಲ ಭಂಡಾರಿಯವರ 70ನೇ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಸಂಸ್ಮರಣೆ ಮಾಡಿ ಮಾತನಾಡಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಂಗಳೂರಿನ ಮಾಜಿ ಮೇಯರ್ ಶಶಿಧರ್ ಹೆಗ್ಡೆ , ಕಾರ್ಕಳದ D.R ರಾಜು, ಕೋಟೇಶ್ವರದ ಸಹನಾ ಗ್ರೂಪ್ ನ ಮುಖ್ಯಸ್ಥ ಸುರೇಂದ್ರ ಶೆಟ್ಟಿ, ಕಾಂಗ್ರೆಸ್ ನಾಯಕರಾದ ನೀರೆ ಕೃಷ್ಣ ಶೆಟ್ಟಿ, ಮಂಜುನಾಥ್ ಪೂಜಾರಿ ಗೋಪಾಲ ಭಂಡಾರಿ ಅವರ ಸಂಸ್ಮರಣೆ ಮಾಡಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ನ ಪ್ರಮುಖರು ಹಾಗೂ ಕಾರ್ಯಕರ್ತರು ಗೋಪಾಲ ಭಂಡಾರಿ ಅವರ ಅಭಿಮಾನಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕೋವಿಡ್ ನಿರ್ಮೂಲನೆಗಾಗಿ ವಿಶೇಷ ಸೇವೆ ಸಲ್ಲಿಸಿದ ವೈದ್ಯರುಗಳನ್ನು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರನ್ನೂ ಸನ್ಮಾನಿಸಲಾಯಿತು ಮತ್ತು ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ನೆರವು ನೀಡಲಾಯಿತು.

